ಕೆಪಿಸಿಸಿ ಅಧ್ಯಕ್ಷಕ್ಕಾಗಿ ನಾನ್ಯಾರಿಗೂ ಭೇಟಿ ಮಾಡಿ ಮನವಿ ಮಾಡಿಲ್ಲ – ಎಂ.ಬಿ.ಪಾಟೀಲ್
ಬಿಜೆಪಿಯಲ್ಲಿ ಸಚಿವ ಸಂಪುಟ ವಿಸ್ತರಣೆಯ ಕಾವು ಹೆಚ್ಚಾದ್ರೆ ಇತ್ತ ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕಿಚ್ಚು ಎಲ್ಲರ ಕುತೂಹಲವನ್ನ ಕೆರಳಿಸಿದೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನ ಆಯ್ಕೆ ಕುರಿತಂತೆ ಹೈಕಮಾಂಡ್ ಇಂದು ಅಥವಾ ನಾಳೆ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಕೆಪಿಸಿಸಿ ಅಧ್ಯಕ್ಷ ಮಾಡಬೇಕೆಂದು ನಾನ್ಯಾರಿಗೂ ಭೇಟಿ ಮಾಡಿ ಮನವಿ ಮಾಡಿಲ್ಲ. ಆದರೆ ಯಾರೂ ಸೂಕ್ತ ಎನ್ನುವ ಪಟ್ಟಿಯಲ್ಲಿ ನನ್ನ ಹೆಸರೂ ಸೂಚಿಸಿದ್ದಾರೆ. ಅದನ್ನೆಲ್ಲ ಹೈಕಮಾಂಡ್ ಇಂದು ಅಥವಾ ನಾಳೆ ಅಂತಿಮಗೊಳಿಸಬಹುದು ಎಂದರು.
ಇನ್ನು ಕೆಪಿಸಿಸಿಗೆ ಕಾರ್ಯಾಧ್ಯಕ್ಷ ನೇಮಕ ಮಾಡುವುದರಿಂದ ಯಾವುದೇ ಸಮಸ್ಯೆ ಕಾಣಿಸುತ್ತಿಲ್ಲ. ಅಧ್ಯಕ್ಷರೊಬ್ಬರೇ ಎಲ್ಲ ಕಡೆಯೂ ಓಡಾಡುವುದಕ್ಕೆ ಸಾಧ್ಯವಾಗುವುದಿಲ್ಲ. ಹೀಗಾಗಿ ಪಕ್ಷದ ಹಿತ ದೃಷ್ಟಿಯಿಂದ ಕಾರ್ಯಾಧ್ಯಕ್ಷ ನೇಮಕ ಮಾಡುವುದರ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಬಹುದು ಎಂದರು.