ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಿತ್ತು ಕಣ್ಣು : ಶಿವಾನಂದ ಎಸ್. ಪಾಟೀಲರಿಗೆ ಸ್ಥಾನ ನೀಡುವಂತೆ ಅಭಿಯಾನ…!
ಕೆಪಿಸಿಸಿ ಅಧ್ಯಕ್ಷ ಸ್ಥಾನ ವಿಚಾರಕ್ಕೆ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ್ ಅಭಿಮಾನಿಗಳು ಫೇಸ್ಬುಕ್, ವಾಟ್ಸಾಫ್ ಗಳಲ್ಲಿ ಅಭಿಯಾನ ಆರಂಭಿಸಿದ್ದಾರೆ.
ಮಾಜಿ ಸಚಿವ ಶಿವಾನಂದ ಎಸ್. ಪಾಟೀಲ ಅವರಿಗೆ ಅಧ್ಯಕ್ಷ ಸ್ಥಾನ ನೀಡುವಂತೆ ಅಭಿಯಾನ ಮಾಡಲಾಗುತ್ತಿದೆ.
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಕಾಂಗ್ರೆಸ್ ಶಾಸಕರಾಗಿರುವ ಶಿವಾನಂದ ಎಸ್. ಪಾಟೀಲ, ಉತ್ತರ ಕರ್ನಾಟಕದ ಪ್ರಬಲ ಲಿಂಗಾಯತ ನಾಯಕ ಶಿವಾನಂದ ಎಸ್. ಪಾಟೀಲ ಅವರಿಗೆ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಒತ್ತಾಯ ಹೇಳಿ ಬಂದಿದೆ. ಸಮ್ಮಿಶ್ರ ಸರಕಾರದಲ್ಲಿ ಆರೋಗ್ಯ ಸಚಿವರಾಗಿದ್ದ ಶಿವಾನಂದ ಎಸ್. ಪಾಟೀಲ ಅಧ್ಯಕ್ಷ ಸ್ಥಾನ ನಿಭಾಯಿಸುವ ಶ್ರೇಷ್ಠ ಶಾಸಕ ಎಂದು ಅಭಿಮಾನಿಗಳು ಅಭಿಯಾನ ನಡೆಸುತ್ತಿದ್ದಾರೆ.