ಕೆರೆಯ ಬಳಿ ಆಟವಾಡಲು ಹೋಗಿದ್ದ ಬಾಲಕ ನೀರು ಪಾಲು…!

ಕೆರೆಯ ಬಳಿ ಆಟವಾಡಲು ಹೋಗಿದ್ದ ಬಾಲಕ ನೀರು ಪಾಲಾದ ಘಟನೆ ಹಾವೇರಿ ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.

ಶಾಹಿಲ್ ಕಳಸದ (12) ವರ್ಷ ಮೃತ ಬಾಲಕ. ನಿನ್ನೆ ಮಧ್ಯಾಹ್ನ ಶಾಲೆಯಿಂದ ಬಂದು ಆಟವಾಡಲು ಹೋಗಿದ್ದ ಬಾಲಕ, ಕೆರೆಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಜೊತೆಗೆ ಹೋಗಿದ್ದ ಸ್ನೇಹಿತರಿಂದ ವಿಷಯ ಬೆಳಕಿಗೆ ಬಂದಿದೆ. 6ನೇ ತರಗತಿ ಓದುತ್ತಿದ್ದ ಬಾಲಕ ಶಾಹಿಲ್ ನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದ‌ನ ಮುಗಿಲು ಮುಟ್ಟಿದೆ.

ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights