ಕೆ.ಆರ್.ಪೇಟೆ ಉಪ ಚುನಾವಣೆ ಹಿನ್ನೆಲೆ : ಮೂರು ಪಕ್ಷದ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
ಮಂಡ್ಯ ಕೆ.ಆರ್.ಪೇಟೆ ಉಪ ಚುನಾವಣೆ ಹಿನ್ನೆಲೆ ನಾಮಪತ್ರ ಸಲ್ಲಿಕೆಯ ಕೊನೆಯ ದಿನ ಪ್ರಮುಖ ಮೂರು ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ.
ಜೆಡಿಎಸ್ ನಿಂದ ಬಿ.ಎಲ್. ದೇವರಾಜು,ಕಾಂಗ್ರೆಸ್ ನಿಂದ ಕೆ.ಬಿ.ಚಂದ್ರಶೇಖರ್,ಬಿಜೆಪಿಯಿಂದ ಕೆ.ಸಿ. ನಾರಾಯಣಗೌಡ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ.
ಬೆಳಿಗ್ಗೆ ೧೧ ಗಂಟೆಗೆ ನಾರಾಯಣಗೌಡ, ೧೨ ಗಂಟೆಗೆ ಕೆ.ಬಿ ಚಂದ್ರಶೇಖರ್ ಮತ್ತು ೧ಗಂಟೆಗೆ ದೇವರಾಜು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಮೂರು ಪಕ್ಷದ ಪ್ರಮುಖ ನಾಯಕರು ಭಾಗಿ ಸಾಧ್ಯತೆ ಇದೆ.