ಕೆ.ಎಸ್. ಈಶ್ವರಪ್ಪಗೆ ಪ್ರಾಣ ಬೆದರಿಕೆ ಕರೆ : CAA ಬಗ್ಗೆ ಮಾತನಾಡದಂತೆ ವಾರ್ನಿಂಗ್..!

CAA ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಈ ಬೆನ್ನಲ್ಲೆ ಸಚಿವ ಕೆ.ಎಸ್. ಈಶ್ವರಪ್ಪ ಬೆದರಿಕೆ ಕಾಲ್ ವೊಂದು ಬಂದಿರುವ ಬಗ್ಗೆ ತಿಳಿದು ಬಂದಿದೆ.

ಹೌದು… ತಮಗೆ ಪ್ರಾಣ ಬೆದರಿಕೆ ಕರೆ ಬರುತ್ತಿರುವ ಹಿನ್ನೆಲೆಯಲ್ಲಿ ಭದ್ರತೆ ನೀಡುವಂತೆ ಸಚಿವ ಕೆ.ಎಸ್. ಈಶ್ವರಪ್ಪ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಆರ್ಟಿಕಲ್​ 370 ಹಾಗೂ CAA ಬಗ್ಗೆ ಮಾತನಾಡದಂತೆ, ನನಗೆ ಜೀವ ಬೆದರಿಕೆ ಕರೆ ಬಂದಿದೆ, ಹೀಗಾಗಿ ಸಿಎಂ ಯಡಿಯೂರಪ್ಪ ಹಾಗೂ ಗೃಹ ಸಚಿವರಿಗೆ ತಿಳಿಸಿ, ನನಗೆ ಭದ್ರತೆ ಒದಗಿಸುವಂತೆ ಕೋರಿದ್ದೇನೆ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.

ಈ ಹಿಂದೆಯೂ ಅನಾಮಧೇಯ ವ್ಯಕ್ತಿಯಿಂದ ಸಚಿವರಿಗೆ ಬೆದರಿಕೆ ಕರೆ ಬಂದ ಹಿನ್ನಲೆಯಲ್ಲಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights