ಕೇಂದ್ರ ಸರ್ಕಾರದಿಂದ ಕಾಂಗ್ರೆಸ್ ನಾಯಕರ ಟಾರ್ಗೆಟ್ : ಹೈಕಮಾಂಡ್ ಗೆ ಖರ್ಗೆ ಮಾಹಿತಿ…
ಅಕ್ರಮ ಹಣ ಪ್ರಕರಣದಲ್ಲಿ ಇಡಿಯಿಂದ ಡಿ.ಕೆ.ಶಿವಕುಮಾರ್ ಬಂಧನವಾಗಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಹೈಕಮಾಂಡ್ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೆಹಲಿಗೆ ಕರೆಸಿಕೊಂಡಿದೆ.
ಡಿ.ಕೆ.ಶಿವಕುಮಾರ್ ಬಂಧನದ ನಂತರ ರಾಜ್ಯ ರಾಜ್ಯಕಾರಣದಲ್ಲಿ ಆಗುತ್ತಿರುವ ಬೆಳವಣಿಗೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರು ಹೈಕಮಾಂಡ್ ಗೆ ಮಾಹಿತಿ ನೀಡುವ ಸಾಧ್ಯತೆ ಇದೆ. ಹಾಗೆಯೇ, ಕೇಂದ್ರ ಸರ್ಕಾರದಿಂದ ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡಲಾಗುತ್ತಿರುವ ಸಾಧ್ಯತೆ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಡಿ.ಕೆ.ಶಿವಕುಮಾರ್ ವಿಚಾರವನ್ನು ಮುಂದಿಟ್ಟುಕೊಂಡು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೋರಾಟ ಮತ್ತು ಜನಾಭಿಪ್ರಾಯ ರೂಪಿಸುವ ರಣತಂತ್ರದ ಬಗ್ಗೆ ಹೈಕಮಾಂಡ್ ಜೊತೆ ಮಲ್ಲಿಕಾರ್ಜುನ ಖರ್ಗೆ ಚರ್ಚೆ ಮಾಡುವ ನಿರೀಕ್ಷೆ ಇದೆ.