ಕೊರೊನಾ ಭೀತಿಯಿಂದ ಕ್ವಾರೆಂಟೈನ್ನಲ್ಲೇ ಆತ್ಮಹತ್ಯೆಗೆ ಶರಣಾದ ಯುವಕ..!
ರಾಜ್ಯದೆಲ್ಲೆಡೆ ಕೊರೊನಾ ಭೀತಿ ಹೆಚ್ಚಾಗಿದ್ದು, ಜನ ಆಂತಕಕ್ಕೆ ಒಳಗಾಗಿದ್ದಾರೆ. ಅದೆಷ್ಟೋ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಮರುಳಿ ಹೋಗಲಾರದೇ ಇದ್ಧ ಜಾಗದಲ್ಲಿಯೂ ಇರಲಾಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲವರು ತಮ್ಮ ೂರುಗಳಿಗೆ ತೆರಳಿದರೂ ಮನೆ ಸೇರಲಾಗದಂತ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಆತಂಕಕ್ಕೆ ಒಳಗಾದ ಯುವಕನೊಬ್ಬ ಮಂಗಳೂರಿನಲ್ಲಿ ಕ್ವಾರೆಂಟೈನ್ನಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಹೌದು… ಇತ್ತೀಚೆಗೆ ಮಹಾರಾಷ್ಟ್ರ, ಮುಂಬೈ, ತಮಿಳುನಾಡಿನಿಂದ ವಲಸೆ ಬಂದವರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಹೊರ ರಾಜ್ಯಗಳಿಮದ ಬಂದವರನ್ನು ಕಡ್ಡಾಯವಾಗಿ ಕ್ವಾರೆಂಟೈನ್ ಮಾಡಲಾಗುತ್ತಿದೆ. ಬುಧವಾರ ಮುಂಬೈನಿಂದ ಬಂದಿದ್ದ ಯುವಕನನ್ನೂ ಅದೇ ರೀತಿ ಕ್ವಾರೆಂಟೈನ್ ಮಾಡಲಾಗಿತ್ತು.ದರೆ ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಕ್ವಾರಂಟೈನ್ ಮಾಡಲಾಗಿದ್ದ ಕಡಂದಲೆ ಶಾಲೆಯಲ್ಲೇ ನೇಣಿಗೆ ಶರಣಾಗಿದ್ದಾನೆ.ಕೊರೊನಾದಿಂದ ಮುಂದಿನ ಜೀವನೋಪಾಯದ ಬಗ್ಗೆ ಹೆದರಿ ಆತ್ಯಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರು ಕೊರೊನಾ ವೈರಸ್ ಭೀತಿಯಿಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಕಡಂದಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕನ ಸಂಬಂಧಿಗಳ ಪತ್ತೆ ಕಾರ್ಯ ನಡೆಸುತ್ತಿದ್ದಾರೆ.