ಕೊರೊನಾ ಸೋಂಕಿನಿಂದ ಯುವಕ ಸಾವು ಎಂದು ಸುಳ್ಳು ಹರಿಬಿಟ್ಟಿದ್ದ ಆರೋಪಿ ಬಂಧನ

ಕೊರೋನಾ ವೈರಸ್​ ಸೋಂಕಿಗೆ ಬಲಿಯಾಗಿ ಯುವಕ ಸಾವನ್ನಪ್ಪಿದ್ದಾನೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದ ಆರೋಪಿಯನ್ನು ಮಂಡ್ಯದ ಜಿಲ್ಲೆಯ ಕೆ.ಆರ್.ಪೇಟೆ ಪೊಲೀಸರು ಬಂಧಿಸಿದ್ದಾರೆ.

ಅಂಬಿಗರಹಳ್ಳಿಯ ಮುತ್ತುರಾಜ್​(19) ಬಂಧಿತ ಯುವಕ. ಈತ ಕೆ.ಆರ್.ಪೇಟೆ ತಾಲ್ಲೂಕಿನ ಹಕ್ಕಿಮಂಚನಹಳ್ಳಿ ಗ್ರಾಮದ ಸುನಿಲ್ ಎಂಬ ಯುವಕ ಕೊರೋನಾದಿಂದ ಮೃತಪಟ್ಟಿದ್ದಾನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದ ಎಂದು ತಿಳಿದು ಬಂದಿದೆ.

ಆರೋಪಿಯು ಸುಳ್ಳು ಸುದ್ದಿ ಹರಿಬಿಟ್ಟಿದ್ದ ಯುವಕ ಬದುಕಿದ್ದರೂ, ಆತನ ಮೇಲೆ ಈ ರೀತಿಯ ಸುಳ್ಳು ಕತೆ ಕಟ್ಟಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ. ಇದರಿಂದ ಮನನೊಂದ ಯುವಕ ಸುನಿಲ್ ಆರೋಪಿ ಮುತ್ತುರಾಜ್‌ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದ. ದೂರಿನ ಮೇರೆಗೆ ಕೆ.ಆರ್.ಪೇಟೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.  ಈ ಸಂಬಂಧ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು, ಮದ್ದೂರು ತಾಲೂಕಿನ ಹುಣಗನಹಳ್ಳಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಆರೋಪಿಯಿಂದ 8 ಲೀಟರ್ ಮದ್ಯ ಹಾಗೂ ಬೈಕ್​​ನ್ನು ಜಪ್ತಿ ಮಾಡಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights