ಕೊರೋನ ಮುಂಜಾಗ್ರತೆ: ಒಂದು ವಾರ ಬಂದ್ ಘೋಷಣೆ ಮಾಡಿದ ಕರ್ನಾಟಕ ಸರ್ಕಾರ

ಕೊರೋನ ವೈರಸ್ ಜಾಗತಿಕವಾಗಿ ವ್ಯಾಪಕವಾಗಿ ಹಬ್ಬುತ್ತಿದ್ದು ಭಾರತದಲ್ಲಿಯೂ 76 ಜನರಿಗೆ ಸೋಂಕು ಇರುವುದು ಪತ್ತೆಯಾಗಿದೆ. ದಿನದಿಂದ ದಿನಕ್ಕೆ ಈ ಸಂಖ್ಯೆ ಏರುತ್ತಿದ್ದು ಇದಕ್ಕೆ ಮುಂಜಾಗ್ರತ ಕ್ರಮವಾಗಿ ಹಲವು ಸಾರ್ವಜನಿಕ ಸಂಸ್ಥೆಗಳನ್ನು- ಕೇಂದ್ರಗಳನ್ನು ಮತ್ತು ಚಟುವಟಿಕೆಗಳನ್ನು ಒಂದು ವಾರದ ಕಾಲ ಬಂಧ್ ಮಾಡುವುದಾಗಿ ಕರ್ನಾಟಕ ಸರ್ಕಾರ ಘೋಷಿಸಿದೆ.

ಮಾಲ್, ಥಿಯೇಟರ್, ಮದುವೆ – ನಿಶ್ಚಿತಾರ್ಥ – ನಾಮಕರಣ ಸಮಾರಂಭಗಳು, ನೈಟ್ ಕ್ಲಬ್ಬುಗಳು, ಪಬ್ಬುಗಳು ಎಲ್ಲವನ್ನೂ ಒಂದು ವಾರ ನಿಲ್ಲಿಸಲಾಗಿದೆ. ಎಲ್ಲ ವಿಶ್ವವಿದ್ಯಾಲಯಗಳು, ಶಾಲೆ ಕಾಲೇಜುಗಳು ಕೂಡ ಒಂದು ವಾರ ಕಾರ್ಯ ನಿರ್ವಹಿಸುವುದಿಲ್ಲ. ಸರ್ಕಾರಿ ಕಚೇರಿಗಳು ಮತ್ತು ಅಧಿವೇಶನ ಮುಂದುವರೆಯಲಿವೆ.

ಅಧಿಕಾರಿಗಳ ಜೊತೆಗೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಈ ತುರ್ತು ಕ್ರಮಗಳನ್ನು ಘೋಷಿಸಿದ್ದಾರೆ. ಎಸ್ ಎಸ್ ಎಲ್ ಸಿ ಹೊರತುಪಡಿಸಿ ಉಳಿದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಐಟಿ ಸಂಸ್ಥೆಗಳ ನೌಕರರು ಮನೆಯಿಂದ ಕೆಲಸ ಮಾಡಲು ಕ್ರಮ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights