ಕೊಲ್ಹಾರ ಬಳಿ ಭೀಕರ ರಸ್ತೆ ಅಪಘಾತ : ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆ
ಟಂಟಂಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ವಿಜಯಪುರದ ಕೊಲ್ಹಾರ ಬಳಿ ನಡೆದಿದೆ.
ಟಂಟಂ ನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನಿಬ್ಬರು ಮಾರ್ಗಮದ್ಯ ಸಾವನ್ನಪ್ಪಿದ್ದಾರೆ. ಇನ್ನಿಬ್ಬರಿಗೆ ಗಂಭೀರವಾಗಿ ಗಾಯಗಳಾಗಿದ್ದು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಜಯಪುರ ಜಿಲ್ಲೆಯ ಕೊಲ್ಹಾರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಈ ವೇಳೆ ಮೃತರ ಕುಟುಂಬಸ್ಥರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ಉಂಟಾಗಿದೆ. ಉದ್ರಿಕ್ತಗೊಂಡ ಸಾರ್ವಜನಿಕರು ಸ್ಥಳಿಯರು ಹಾಗು ಸಾರ್ವಜನಿಕರಿಂದ ಪಿಎಸ್ಐ ಹಾಗೂ ಪೇದೆಗಳ ಮೇಲೆ ಹಲ್ಲೆ , ಕಲ್ಲು ತೂರಾಟ ನಡೆಸಿ, ಪಿಎಸ್ ಐ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು.