ಗದ್ದೆಗೆ ನುಗ್ಗಿದ ವಿದ್ಯಾರ್ಥಿಗಳು ಸೇರಿದಂತೆ 60 ಜನ ಪ್ರಯಾಣಿಕರಿದ್ದ ಸಾರಿಗೆ ಬಸ್…!
ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ಸೋಂದು ಗದ್ದೆಗೆ ನುಗ್ಗಿದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಾ ಬಳಿ ನಡೆದಿದೆ.
ಇಂದು ಬೆಳಿಗ್ಗೆ ಶಕ್ತಿ ನಗರದಿಂದ ಗಜೇಂದ್ರಗಡಕ್ಕೆ ತೆರಳುತ್ತಿದ್ದ ಬಸ್ ನಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 60ಜನ ಪ್ರಯಾಣಿಕರಿದ್ದರು. ಈ ವೇಳೆ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ಗದ್ದೆಗೆ ನುಗ್ಗಿದೆ.
ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯದಿಂದ ಎಲ್ಲರೂ ಪಾರಾಗಿದ್ದಾರೆ.