ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಗೂಡ್ಸ್ ಆಟೋ : ಓರ್ವ ಸಾವು, ಮೂವರಿಗೆ ಗಾಯ
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಮರಕ್ಕೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೆ ಓರ್ವ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯವಾಗಿದೆ.
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನ ಕಂಚಮಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಮದ್ಯ ಸೇವನೆ ಮಾಡಿ ಚಾಲಕ ವಾಹನ ಚಲಾಯಿಸುತ್ತಿದ್ದ, ಮೀತಿಮೀರಿದ ಮಧ್ಯಸೇವೆನೆಯಿಂದ ನಿಯಂತ್ರಣಕ್ಕೆ ಸಿಗದ ವಾಹನ ಮರಕ್ಕೆ ಗುದ್ದಿದ್ದಾನೆ.
ನಜ್ಜುಗುಜ್ಜಾದ ವಾಹನದಲ್ಲಿ ಸಿಲುಕಿರುವ ಮೂರು ಮಂದಿ ಹಾಗೂ ಮೃತನ ದೇಹವನ್ನು ಹೊರತೆಗೆಯಲು ಪೊಲೀಸರ ಹರಸಾಹಸ ಪಡುತ್ತಿದ್ದಾರೆ. ಕಟ್ಟರ್ ಬಳಸಿ ಗಾಯಾಳು ರಕ್ಷಿಸಲು ಪ್ರಯತ್ನ ಮಾಡಲಾಗುತ್ತಿದೆ.
ಮೈಸೂರಿನಿಂದ ಕೇರಳಕ್ಕೆ ತರಕಾರಿ ಸಾಗಿಸುತ್ತಿದ್ದ ಗೂಡ್ಸ್ ವಾಹನ ಇದಾಗಿದ್ದು, ಸಂಬಂಧಕರಿಗೆ ವಿಚಾಋ ತಿಳಿಸುವ ಪ್ರಯತ್ನ ನಡೆಯುತ್ತಿದೆ. ಸ್ಥಳಕ್ಕೆ ಹೆಚ್.ಡಿ.ಕೋಟೆ ಪೊಲೀಸರ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.