ಚಿರತೆ ದಾಳಿಯಿಂದ 10 ಕುರಿಗಳನ್ನು ಕಳೆದುಕೊಂಡ ರೈತ : ಅರಣ್ಯ ಇಲಾಖೆ ವಿರುದ್ಧ ಆಕ್ರೋಶ
ಮನೆಯಲ್ಲಿ ಕೂಡಿ ಹಾಕಿದ್ದ ಕುರಿಗಳ ಮೇಲೆ ಚಿರತೆಯೊಂದು ದಾಳಿ ನಡೆಸಿ 10 ಕುರಿಗಳನ್ನು ಕೊಂದು 2 ಕುರಿಗಳನ್ನು ಹೊತ್ತೊಯ್ದಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ನಾಗಮಂಗಲ ತಾಲೂಕಿನ ಬೋರಿಕೊಪ್ಪಲು ಗ್ರಾಮದಲ್ಲಿ ತಡರಾತ್ರಿ ಈ ಘಟನೆ ನಡೆದಿದ್ದು,ಸುರೇಶ್ ಎಂಬುವರಿಗೆ ಸೇರಿದ ಕುರಿಗಳನ್ನು ಕೊಂದು ಹಾಕಿದೆ. ಕುರಿಗಳ ಸಾವಿನಿಂದ ರೈತ ಕಂಗಾಲಾಗಿದ್ದು ಪರಿಹಾರಕ್ಕಾಗಿ ಮನವಿ ಮಾಡಿದ್ದು, ಚಿರತೆ ಹಾವಳಿಯ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ರು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ನನ್ನ ಕುರಿಗಳ ಸಾವಿಗೆ ಅರಣ್ಯ ಇಲಾಖೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾನೆ.