ಚುನಾವಣೆಯಲ್ಲಿ ಸುಳ್ಳು ಪ್ರಮಾಣ ಪತ್ರ ಸಲ್ಲಿಕೆ ಆರೋಪ : ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟ!

ಹಾಸನದ ಚುನಾವಣೆಯಲ್ಲಿ ಸುಳ್ಳು ಪ್ರಮಾಣ ಪತ್ರ ಸಲ್ಲಿಕೆ ಆರೋಪದಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟ ಶುರುವಾಗಿದೆ.

ಹೌದು… ಸುಳ್ಳು ಪ್ರಮಾಣ ಪತ್ರ ಸಂಬಂಧ ಮಾಜಿ ಸಚಿವ ಎ,ಮಂಜು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಇದು ಮಾಜಿ ಪ್ರಧಾನಿ ಹೆಚ್,ಡಿ,ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟಕ್ಕೆ ಸಿಲುಕಿಸಿದೆ. ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠದಿಂದ ಇಂದು ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಲಿದೆ.

ಸುಪ್ರೀಂ ಕೋರ್ಟ್ನಲ್ಲಿ ಇಂದು 11 ಗಂಟೆಗೆ ನ್ಯಾಯಮೂರ್ತಿಗಳಾದ ಗಾನವಿ ಮತ್ತು ಸೂರ್ಯಕಾಂತ್ ರ ದ್ವಿಸದಸ್ಯ ಪೀಠದಿಂದ ಎ,ಮಂಜು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಲಿದೆ. ಮಾಜಿ ಸಚಿವ ಮತ್ತು ಬಿಜೆಪಿ ಮುಖಂಡ ಎ,ಮಂಜು ಅವರು ಫೆ,24 ರಂದು ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ಈ ಹಿಂದೆ ಹೈಕೋರ್ಟ್ ನಲ್ಲಿ ಎ,ಮಂಜು ಸಲ್ಲಿಸಿದ್ದ ಅರ್ಜಿ ವಜಾಗೊಂಡಿತ್ತು. ಹೈಕೋರ್ಟ್ ನಲ್ಲಿ ಪ್ರಮಾಣ ಪತ್ರ ಸಲ್ಲಿಸಿಲ್ಲಾ ಎಂಬ ಕಾರಣದಿಂದ ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ರ ಪೀಠ ಅರ್ಜಿ ವಜಾಗೊಳಿಸಿತ್ತು. ಹೈಕೋರ್ಟ್ ನ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿರುವ ಮಾಜಿ ಸಚಿವ ಎ,ಮಂಜು, ಪರ ಅಶೋಕ್ ಬನ್ನಿದಿನ್ನಿ ಎಂಬ ವಕೀಲರಿಂದ ಇಂದು ವಾದ ಮಂಡನೆಯಾಗಲಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights