ಜಮ್ಮು ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಉಂಟಾಗುವ ಸಾಧ್ಯತೆ : ಗುಪ್ತಚರ ಇಲಾಖೆಯಿಂದ ಎಚ್ಚರಿಕೆ!
370 ನೇ ವಿಧಿ ರದ್ಧಾದ ಬಳಿಕ ಬಹುತೇಕ ಶಾಂತವಾಗಿರುವ ಜಮ್ಮು ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಉಂಟಾಗುವ ಸಾಧ್ಯತೆಯಿದೆ, ಎಚ್ಚರಿಕೆಯಿಂದ ಇರುವಂತೆ ರಕ್ಷಣಾ ಪಡೆಗಳಿಗೆ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
ಅಫ್ಘಾನಿಸ್ಥಾನ ಮೂಲದ ಶಸ್ತ್ರ ಸಜ್ಜಿತ, ಯುದ್ದ ನಿಪುಣ ಉಗ್ರರು ಭಾರತದ ಗಡಿಯೊಳಗೆ ನುಗ್ಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವರದಿಯ ಪ್ರಕಾರ ಸುಮಾರು 350ರಿಂದ 400 ಉಗ್ರರು ಈಗಾಗಲೇ ಕಾಶ್ಮೀರ ಕಣಿವೆಗೆ ನುಸುಳಲು ಯೋಜನೆ ರೂಪಿಸಿದೆ.
ಜಮ್ಮು ಕಾಶ್ಮೀರ ಮಾತ್ರವಲ್ಲದೆ ಪಂಜಾಬ್ ಮತ್ತು ರಾಜಸ್ಥಾನದಲ್ಲಿಯೂ ಉಗ್ರರು ನುಸುಳುವ ಸಾಧ್ಯತೆ ಇದೆ. ಅಲ್ಲೂ ಕಟ್ಟೆಚ್ಚರ ವಹಿಸುವಂತೆ ಆದೇಶಿಸಲಾಗಿದೆ ಎಂದು ವರದಿಯಾಗಿದೆ. ಮಾರ್ಚ್ ತಿಂಗಳ ನಂತರ ಉಗ್ರರ ಒಳ ನುಸುಳುವಿಕೆ ಜಾಸ್ತಿಯಾಗಬಹುದು ಎಂದು ವರದಿಯಾಗಿದೆ.