ಜೆ.ಎನ್.ಯು ವಿದ್ಯಾರ್ಥಿಗಳಿಗೆ ಸಾಥ್ ಕೊಟ್ಟ ನಟಿ ದೀಪಿಕಾಗೆ ಸಂಸದ ಪ್ರತಾಪ್ ಸಿಂಹ ಟಾಂಗ್

ದೆಹಲಿಯ ಜೆ.ಎನ್.ಯು ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡಿಸಿದ ನಟಿ ದೀಪಿಕಾ ಪಡಕೋಣೆಗೆ ಸಂಸದ ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದಾರೆ.

ದೆಹಲಿಯ ಜೆ.ಎನ್.ಯುನಲ್ಲಿ ಗಲಾಟೆ ಹಿನ್ನೆಲೆ ಘಟನೆ ಸಂಬಂಧ ಸಂಸದ ಪ್ರತಾಪ್ ಸಿಂಹ ಮೈಸೂರಿನಲ್ಲಿ ಪ್ರತಿಕ್ರಿಯಿಸಿ, ಪ್ರಕರಣ ಸಂಬಂಧ ಈಗಾಗಲೇ ತನಿಖೆಗೆ ಆದೇಶಿಸಲಾಗಿದೆ. ಘಟನೆಯಲ್ಲಿ ಎಬಿವಿಪಿ ಕಾರ್ಯಕರ್ತರಿಗೂ ಪೆಟ್ಟು ಬಿದ್ದಿದೆ. ಇದೀಗ ಸಿನಿಮಾ ನಟ ನಟಿಯರನ್ನು ಕರೆತಂದಿದ್ದಾರೆ. ಈ‌ ಮೂಲಕ ಪ್ರಕರಣಕ್ಕೆ ಬೇರೆ ರೂಪ ಕೊಡುವ ಯತ್ನ ನಡೆದಿವೆ. ಜವಹರಲಾಲ್ ನೆಹರು ಸ್ಥಾಪಿಸಿದ ಜೆ.ಎನ್.ಯುಗೆ. ಸ್ವತಃ ಇಂದಿರಾಗಾಂಧಿಯವರು ಪ್ರವೇಶಿಸಲು ಅನುಮತಿ ನೀಡಿರಲಿಲ್ಲ. ಇಂದಿರಾ ಗಾಂಧಿಯವರಿಗೂ ಭಾಷಣ ಮಾಡದಂತೆ ಅಡ್ಡಿ ಪಡಿಸಲಾಗಿತ್ತು. ಪರಿಣಾಮ 45 ದಿನಗಳ ಕಾಲ ಜೆ.ಎನ್.ಯುವನ್ನು ಇಂದಿರಾ ಗಾಂಧಿಯವರು ಬಂದ್ ಮಾಡಿಸಿದ್ದರು. ಇದು ಕಾಂಗ್ರೆಸ್ಸಿಗರಿಗೆ ಗೊತ್ತಿಲ್ಲವೇ.? ಎಂದು ಪ್ರಶ್ನಿಸಿದ್ದಾರೆ.

ಜೆ.ಎನ್.ಯು ಗೆ ನಟಿ ದೀಪಿಕಾ ಪಡುಕೋಣೆ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಂಸದರು, ದೀಪಿಕಾ ಪಡುಕೋಣೆಯವರ ಹೊಸ ಚಿತ್ರ ಮುಂದಿನ ವಾರ ಬಿಡುಗಡೆಯಾಗುತ್ತಿದೆ. ಅವರಿಗೆ ಬೆಸ್ಟ್ ಆಫ್ ಲಕ್ ಹೇಳುತ್ತೇನೆ. ಅವರು ಒಳ್ಳೆಯ ವಿಚಾರಗಳಿಗೆ ಬೆಂಬಲ ಸೂಚಿಸಿದರೆ ಒಳಿತು. ಒಳ್ಳೆಯ ಸಿನಿಮಾ ಮಾಡಿದರೆ ಜನ ಮೆಚ್ಚಿ ನೋಡುತ್ತಾರೆ. ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಕೇವಲ ಜೆ.ಎನ್.ಯು. ಜಾಮಿಯಾ ವಿವಿಗಳು ಮಾತ್ರ ಇಲ್ಲ. ದೇಶಾದ್ಯಂತ 600ಕ್ಕೂ ಹೆಚ್ಚು ವಿ.ವಿಗಳಿವೆ. ಹೋರಾಟಗಳಲ್ಲಿ ಭಾಗಿಯಾಗಬೇಡಿ ಎಂದು ಹೇಳುವುದಿಲ್ಲ. ಒಳ್ಳೆಯ ವಿಚಾರಗಳಿಗೆ ಬೆಂಬಲ ಕೊಡಲಿ ಎಂದು ನಟಿ ದೀಪಿಕಾ ಪಡುಕೋಣೆಗೆ ಸಂಸದ ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights