ಟ್ರಕ್ ಪಲ್ಟಿಯಾಗಿ ಐವರು ವಲಸೆ ಕಾರ್ಮಿಕರು ಸಾವು! : 15 ಮಂದಿಗೆ ಗಂಭೀರ ಗಾಯ!
ಮಾವಿನಹಣ್ಣುಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್ವೊಂದು ಪಲ್ಟಿಯಾದ ಪರಿಣಾಮ ಸ್ಥಳದಲ್ಲಿಯೇ ಐವರು ವಲಸೆ ಕಾರ್ಮಿಕರು ಮೃತಪಟ್ಟಿದ್ದು, 15 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಶನಿವಾರ ರಾತ್ರಿ 20 ಮಂದಿ ವಲಸೆ ಕಾರ್ಮಿಕರು ಹೈದರಾಬಾದ್ ನಿಂದ 200 ಕಿ.ಮೀ ದೂರದಲ್ಲಿರುವ ಉತ್ತರಪ್ರದೇಶದ ಹಳ್ಳಿಗೆ ಮತ್ತು ಮಧ್ಯ ಪ್ರದೇಶ ಝಾನ್ಸಿ ನಗರಕ್ಕೆ ಮಾವಿನಹಣ್ಣು ಸಾಗಿಸಲು ತೆರಳುತ್ತಿದ್ದರು.
ಟ್ರಕ್ ಮಧ್ಯಪ್ರದೇಶದ ನರಸಿಂಗ್ಪುರದ ಗ್ರಾಮಕ್ಕೆ ಬರುತ್ತಿದ್ದಂತೆ ಪಲ್ಟಿಯಾಗಿದೆ. ಪರಿಣಾಮ ಐವರು ವಲಸೆ ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಒಬ್ಬ ಕಾರ್ಮಿಕನಿಗೆ ಕೊರೊನಾ ಲಕ್ಷಣ ಕಂಡು ಬಂದಿದ್ದರಿಂದ ಎಲ್ಲರನ್ನು ಕೊರೊನಾ ವೈರಸ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದರು. ಇದುವರೆಗೂ ದೇಶಾದ್ಯಂತ 60,000ಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದ್ದು, 1,900ಕ್ಕೂ ಹೆಚ್ಚು ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.