ಡಿಕೆಶಿ ಅರ್ಜಿ ವಿಚಾರಣೆ ಅಕ್ಟೋಬರ್ 14ಕ್ಕೆ ಮುಂದೂಡಿಕೆ : ಅಲ್ಲಿಯವರೆಗೂ ಜೈಲು ವಾಸ ಫಿಕ್ಸ್

ಜಾಮೀನು ಕೋರಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 14 ಕ್ಕೆ ಮುಂದೂಡಲಾಗಿದ್ದು, ಹೀಗಾಗಿ ಅಲ್ಲಿಯವರೆಗೂ ಡಿ.ಕೆ. ಶಿವಕುಮಾರ್‌ ಜೈಲು ವಾಸ ಮುಂದುವರೆಯಲಿದೆ.

ನ್ಯಾಯಾಂಗ ಬಂಧನಕ್ಕೊಳಗಾಗಿ ದೆಹಲಿಯ ತಿಹಾರ್‌ ಜೈಲಿನಲ್ಲಿರುವ ಡಿ.ಕೆ. ಶಿವಕುಮಾರ್‌, ದೆಹಲಿ ಹೈಕೋರ್ಟ್‌ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇದೀಗ ಜಾಮೀನು ರದ್ದತಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ನ್ಯಾಯಾಧೀಶರು ಜಾರಿ ನಿರ್ದೇಶನಾಲಯಕ್ಕೆ ನೋಟೀಸ್‌ ಜಾರಿ ಮಾಡಿದ್ದಾರೆ.

ಅಲ್ಲದೆ ವಿಚಾರಣೆಯನ್ನು ಅಕ್ಟೋಬರ್‌ 14 ಕ್ಕೆ ಮುಂದೂಡಲಾಗಿದ್ದು, ಹೀಗಾಗಿ ಅಲ್ಲಿಯವರೆಗೆ ಡಿ.ಕೆ. ಶಿವಕುಮಾರ್‌ ಜೈಲು ವಾಸ ಮುಂದುವರೆಯಲಿದೆ. ಡಿ.ಕೆ. ಶಿವಕುಮಾರ್‌ ಅವರಿಗೆ ಜಾಮೀನು ಸಿಕ್ಕಿ ದಸರಾ ಹಬ್ಬಕ್ಕೆ ಮನೆಗೆ ಬರಬಹುದೆಂಬ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳ ನಿರೀಕ್ಷೆ ಹುಸಿಯಾಗಿದ್ದು, ನಿರಾಶರಾಗಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights