ತಾಂತ್ರಿಕ ತೊಂದರೆ ಹಿನ್ನೆಲೆ ಸೇನಾ ಹೆಲಿಕ್ಯಾಪ್ಟರ್ ತುರ್ತು ಭೂ ಸ್ಪರ್ಶ….
ತಾಂತ್ರಿಕ ತೊಂದರೆ ಹಿನ್ನೆಲೆ ಸೇನಾ ಹೆಲಿಕ್ಯಾಪ್ಟರ್ ತುರ್ತು ಭೂ ಸ್ಪರ್ಶ ಮಾಡಿದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಚೆನ್ನಹಳ್ಳಿ ಬಳಿ ನಡೆದಿದೆ.
ಮೈಸೂರಿನ ಏರ್ ಷೋ ಗಾಗಿ ತೆರಳುತ್ತಿದ್ದ ಸೇನಾ ಹೆಲಿಕ್ಯಾಪ್ಟರ್ ನ ಹೈಡ್ರಾಲಿಕ್ ವ್ಯವಸ್ಥೆ ಕೈಕೊಟ್ಟಿದ್ರಿಂದ ತುರ್ತು ಭೂಸ್ಪರ್ಶ ಮಾಡಿದೆ. ಸೇನಾ ಹೆಲಿಕ್ಯಾಪ್ಟರ್ ಫೈಲಟ್ ತುರ್ತು ಭೂಸ್ಪರ್ಶ ಮಾಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸೇನಾ ಹೆಲಿಕ್ಯಾಪ್ಟರ್ ಪೈಲಟ್ ನ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ. ಅರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.