ನೀರಿಗಾಗಿ ನೀರಾವರಿ ಅಧಿಕಾರಿಗಳ ವಿರುದ್ಧ ಅನ್ನದಾತರ ಆಕ್ರೋಶ, ಪ್ರತಿಭಟನೆ…!
ಬೇಸಿಗೆ ಬೆಳೆಗೆ ನೀರು ಬಿಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ರೈತರಿಂದ ಪ್ರತಿಭಟನೆ ಮಾಡಲಾಗುತ್ತಿದೆ.
ಕಾವೇರಿ ಹಾಗೂ ಕಬಿನಿ ಅಚ್ಚುಕಟ್ಟು ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ರಾಜ್ಯ ಕಬ್ಬುಬೆಳೆಗಾರರ ಸಂಘದ ರೈತರು ಮೈಸೂರಿನ ಕಾಡಾ ಕಛೇರಿಗೆ ಮುತ್ತಿಗೆ ಹಾಕಿದ್ದಾರೆ. ಈ ವೇಳೆ ಪ್ರತಿಭಟನಾನಿರತ ರೈತರನ್ನ ತಡೆದ ಪೋಲಿಸರು ರೈತರ ನಡುವೆ ಮಾತಿನ ಚಕಮಕಿ ಆಗಿದ್ದು ನೀರಾವರಿ ಅಧಿಕಾರಿಗಳ ವಿರುದ್ದ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ನಾಲೆಗಳಿಗೆ ನೀರು ಬೀಡುವಂತೆ ಫೆ.4ರಂದೆ ನೀರಾವರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು, ಮನವಿಯಲ್ಲಿ ಕಬಿನಿ ಜಲಾಶಯದ ಎಡದಂಡೆ, ಬಲದಂಡೆ ನಾಲೆ, ರಾಂಪುರ ನಾಲೆ, ಹುಲ್ಲಹಳ್ಳಿ ನಾಲೆ. ವರುಣಾ ನಾಲೆ, ಚಿಕ್ಕದೇವರಾಜ ನಾಲೆ. ವಿಸಿ ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಲಾಗಿತ್ತು.
ಆದರೆ ನೀರು ಬಿಡದ ಕಾರಣ ಇಂದು ಪ್ರತಿಭಟನೆಗಿಳಿದ ರೈತರು ನೀರು ಬಿಡುಗಡೆ ಮಾಡುವವರೆಗೂ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿದ್ದಾರೆ.