ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ರಾಜ್ಯ ಹೆದ್ದಾರಿ ತಡೆದು ಸಂತ್ರಸ್ತರ ಪ್ರತಿಭಟನೆ…

ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಜೀರಗಾಳ ಗ್ರಾಮದಲ್ಲಿ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ರಾಜ್ಯ ಹೆದ್ದಾರಿ ತಡೆದು ಸಂತ್ರಸ್ತರು ಪ್ರತಿಭಟನೆ ಮಾಡುತ್ತಿದ್ದಾರೆ.

ಪ್ರವಾಹದಿಂದ ಅತ್ತ ಕೆಲಸವಿಲ್ಲ, ಇತ್ತ ಬೆಳೆ ನಾಶವಾಗಿದ್ದಕ್ಕೆ ಪರಿಹಾರವಿಲ್ಲ. ಸರ್ಕಾರದ ನಡೆ ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಧಾರವಾಡ- ವಿಜಯಪುರ ರಾಜ್ಯ ಹೆದ್ದಾರಿ ತಡೆಯಿಂದಾಗಿ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ.

ಜೀರಗಾಳ ಗ್ರಾಮದ ಮಹಿಳೆಯರಿಂದ ಪ್ರತಿಭಟನೆ ಮಾಡಲಾಗುತ್ತಿದೆ. ಸ್ಥಳಕ್ಕೆ ಮುಧೋಳ ತಹಶಿಲ್ದಾರ್ ಬರುವಂತೆ ಸಂತ್ರಸ್ತರು ಪಟ್ಟು ಹಿಡಿದಿದ್ದಾರೆ. ರಸ್ತೆ ತಡೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights