ಪೌರತ್ವ ತಿದ್ದುಪಡಿಗೆ ವಿರೋಧ : ಮಂಗಳೂರಿನಲ್ಲಿ ಪೊಲೀಸ್ ಗುಂಡಿಗೆ ಇಬ್ಬರು ಬಲಿ..!
ಪೌರತ್ವ ಕಾಯ್ದೆ ವಿರೋಧಿಸಿ ನಗರದಲ್ಲಿ ನಡೆದ ಪ್ರತಿಭಟನೆ ಸಂದರ್ಭ ಪೊಲೀಸರ ಗುಂಡಿಗೆ ಇಬ್ಬರು ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಪ್ರತಿಭಟನೆ ಸಂದರ್ಭ ಬಂದರ್ ಸಮೀಪ ಪೊಲೀಸರ ಗುಂಡಿಗೆ ಇಬ್ಬರು ಬಲಿಯಾಗಿದ್ದಾರೆ ಎಂದು ಮಾಹಿತಿ ಲಭಿಸಿದೆ. ಒಬ್ಬರ ಕಣ್ಣಿಗೆ ಗುಂಡೇಟು ಬಿದ್ದಿದ್ದರೆ, ಮತ್ತೊಬ್ಬರ ಬೆನ್ನಿಗೆ ಗುಂಡು ಬಿದ್ದಿದೆ ಎಂದು ತಿಳಿದುಬಂದಿದೆ. ಇಬ್ಬರನ್ನೂ ತಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಇಬ್ಬರೂ ಮೃತಪಟ್ಟಿರುವುದಾಗಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಮೃತಪಟ್ಟ ಒಬ್ಬರು ಬಂದರ್ ನಿವಾಸಿ, ಮತ್ತೊಬ್ಬರು ಕಂದಕ್ ನಿವಾಸಿ ಎಂದು ತಿಳಿದುಬಂದಿದೆ.