ಪ್ರಚಾರಕ್ಕಾಗಿಯಷ್ಟೇ ಪ್ಯಾಕೇಜ್ ಘೋಷಿಸುತ್ತಿದೆ ಸರ್ಕಾರ: ಹೆಚ್.ಡಿ.ಕುಮಾರಸ್ವಾಮಿ
ಕೊರೊನಾ ನಿಯಂತ್ರಣಕ್ಕಾಗಿ ದೇಶದಲ್ಲಿ ಲಾಕ್ಡೌನ್ ಮಾಡಲಾಗಿತ್ತು. ಲಾಕ್ಡೌನ್ ಸಂದರ್ಭದಲ್ಲಿ ಎದುರಾದ ಸಮಸ್ಯೆಗಳನ್ನು ಎದುರಿಸಲು ಸರ್ಕಾರ ಬಿಡುಗಡೆ ಮಾಡಿರುವ 1610 ಕೋಟಿ ರೂ. ಪ್ಯಾಕೇಜ್ ಸಹ ನೆರೆ ಪರಿಹಾರದ ಪ್ಯಾಕೇಜ್ ನಂತೆ ಬರೀ ಘೋಷಣೆಯಂತಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ರಾಜರಾಜೇಶ್ವರಿ ವಿಧಾನ ಸಭಾಕ್ಷೇತ್ರದಲ್ಲಿ ಜೆಡಿಎಸ್ ಮುಖಂಡ ಜಿ.ಕೃಷ್ಣ ಮೂರ್ತಿ ಸುಮಾರು 15 ಸಾವಿರ ಬಡವರಿಗೆ ಉಚಿತ ಆಹಾರ ಸಾಮಗ್ರಿಗಳ ವಿತರಿಸಿದರು. ಆಹಾರ ಸಾಮಗ್ರಿಗಳ ವಿತರಣೆಗೆ ಎಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದರು.
ಚಾಲನೆ ನೀಡದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಹಲವು ವರ್ಗಗಳಿಗೆ ಪರಿಹಾರ ಘೋಷಣೆ ಮಾಡಿದೆಯಾದರೂ ಆ ವರ್ಗದ ಜನರನ್ನು ಗುರುತಿಸುವ ಕೆಲಸವನ್ನು ಮಾತ್ರ ಮಾಡುತ್ತಿಲ್ಲ. ಅಸಂಘಟಿತ ಕಾರ್ಮಿಕ ವರ್ಗದವರಿಗೆ ಹೇಗೆ ಪರಿಹಾರ ತಲುಪಿಸುತ್ತೀರಿ? ಎಂದು ಪ್ರಶ್ನಿಸಿದರು.
ಇದನ್ನೂ ಓದಿ: ಒಬ್ಬ ಕಾರ್ಮಿಕನೂ ಸಾವು, ನೋವಿಗೆ ತುತ್ತಾಗದಂತೆ ಸರ್ಕಾರ ನೋಡಿಕೊಳ್ಳಬೇಕು: ಸಿದ್ದರಾಮಯ್ಯ ಆಗ್ರಹ