ಪ್ರಣಬ್ ಮುಖರ್ಜಿ ಬದುಕಿದ್ದಾರೆ; ಭಾರತ ಮಾಧ್ಯಮಗಳು ಫೇಕ್‌ನ್ಯೂಸ್‌ ಫ್ಯಾಕ್ಟರಿಗಳಾಗಿವೆ: ಅಭಿಜಿತ್ ಮುಖರ್ಜಿ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಗಂಬೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ಕೆಲವು ಮಾಧ್ಯಮಗಳು ಪ್ರಣಬ್ ಮುಖರ್ಜಿಯವರು ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಮಾಡಿವೆ. ಹಾಗಾಗಿ ಅವರ ಪುತ್ರ ಅಭಿಜಿತ್ ಮುಖರ್ಜಿ ಮಾಧ್ಯಮಗಳ ವಿರುದ್ಧ ಕಿಡಿ ಕಾರಿದ್ದಾರೆ.

“ನನ್ನ ತಂದೆ ಇನ್ನೂ ಜೀವಂತವಾಗಿದ್ದಾರೆ, ಅವರ ಆರೋಗ್ಯ ಸ್ಥಿರವಾಗಿದೆ. ಅವರ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿಗಳನ್ನು ಖ್ಯಾತ ಪತ್ರಕರ್ತರು ಸೋಷಿಯಲ್ ಮೀಡಿಯಾಗಳಲ್ಲಿ ಹಬ್ಬಿಸುತ್ತಿದ್ದಾರೆ ಎಂದು” ಅಭಿಜಿತ್ ಮುಖರ್ಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿ ಮಾಧ್ಯಮಗಳು ನಕಲಿ ಸುದ್ದಿ ಸೃಷ್ಟಿಸುವ ಫ್ಯಾಕ್ಟರಿಗಳಾಗಿಬಿಟ್ಟಿವೆ ಎಂದು ಅವರು ಟ್ವೀಟ್ ಮೂಲಕ ಬೇಸರ ವ್ಯಕ್ತಿಪಡಿಸಿದ್ದಾರೆ.


ಇದನ್ನೂ ಓದಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರ; ವೆಂಟಿಲೇಟರ್ ಚಿಕಿತ್ಸೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights