ಪ್ರವಾಹ ನಿರ್ವಹಣೆಯಲ್ಲಿ ಸರ್ಕಾರ ವಿಫಲ; ಕೊಡಗಿಗೆ 10 ಸಾವಿರ ಕೋಟಿ ವಿಶೇಷ ಪ್ಯಾಕೇಜ್ ಬೇಕು: ಡಿ.ಕೆ ಶಿವಕುಮಾರ್
ಪ್ರವಾಹದ ವಿಚಾರವು ವ್ಯಕ್ತಿ ಅಥವಾ ಪಕ್ಷದ ವಿಚಾರವಲ್ಲ. ಇದು ನಾವು ಹುಟ್ಟಿ ಬೆಳೆದ ತಾಯ್ನಾಡಿನ ವಿಚಾರ. ಕಳೆದ ಮೂರು ವರ್ಷಗಳಿಂದ ಈ ಸಮಸ್ಯೆ ಎದುರಾಗುತ್ತಿದ್ದು, ಅದಕ್ಕೂ ಮುಂಚೆಯೂ ಈ ಸಮಸ್ಯೆ ಕಾಣಿಸಿಕೊಂಡಿತ್ತು. ರಾಜ್ಯದಲ್ಲಿ ಎದುರಾಗುತ್ತಿರುವ ಪ್ರವಾಹ ಸಂದರ್ಭದಲ್ಲಿ ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡಬೇಕು. ಕೊಡಗು ಭಾಗದ ಜನರ ಶಾಶ್ವತ ರಕ್ಷಣೆಗೆ ನಾವೆಲ್ಲರೂ ಒಟ್ಟಾಗಿ ಮುಂದಿನ ಅಧಿವೇಶನದಲ್ಲಿ 10 ಸಾವಿರ ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಕೊಡಗಿಗೆ ಭೇಟಿ ನೀಡಿದ್ದ ಡಿಕೆ ಶಿವಕುಮಾರ್, ನಾನಿಲ್ಲಿ ಯಾವುದೋ ಒಂದು ಸರ್ಕಾರ, ಒಂದು ಪಕ್ಷದ ವಿರುದ್ಧ ದೂರಲು ಬಂದಿಲ್ಲ. ಈ ಸಮಸ್ಯೆಗೆ ಎಲ್ಲರೂ ಒಟ್ಟಿಗೆ ಸೇರಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಇಲ್ಲಿನ ಜನರಿಗೆ ಸುರಕ್ಷಿತ ಸ್ಥಳದಲ್ಲಿ ಮನೆಗಳಾಗಬೇಕು. ಅನೇಕ ಕಡೆ ತಡೆಗೋಡೆ ನಿರ್ಮಾಣವಾಗಬೇಕು. ಇಲ್ಲಿನ ಜನ ಕೃಷಿ ಹಾಗೂ ಪ್ರವಾಸೋದ್ಯಮದ ಮೇಲೆ ಅವಲಂಬಿತರಾಗಿದ್ದಾರೆ. ಹೀಗಾಗಿ ಇಲ್ಲಿ ತಡೆಗೋಡೆ ನಿರ್ಮಾಣ ಹಾಗೂ ರಸ್ತೆ ಸಂಪರ್ಕ ಕಲ್ಪಿಸಬೇಕು ಎಂದು ಹೇಳಿದ್ದಾರೆ.
ರಾಜ್ಯಕ್ಕೆ ಕಿರೀಟದಂತಿರುವ ಕೊಡಗು ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಪ್ರಾಕೖತ್ತಿಕ ವಿಕೋಪ ಸಂಬಂಧಿತ ರಾಜಕೀಯ ಬೇಧ ಮರೆತು ಎಲ್ಲಾ ಪಕ್ಷಗಳ ನಾಯಕರು ಒಂದಾಗಿ ಶಾಶ್ವತವಾದ ಪರಿಹಾರ ಕ್ರಮಗಳ ಯೋಜನೆಯನ್ನು ಸಕಾ೯ರದ ಮೂಲಕ ಜಾರಿಗೊಳಿಸಬೇಕಾಗಿದೆ ಎಂದು ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ದೇಶಕ್ಕೆ ಅಪ್ರತಿಮ ಸೈನಿಕರನ್ನು ನೀಡಿದ, ಜೀವನದಿ ಕಾವೇರಿಯ ತವರೂರಾದ ಕೊಡಗು, ಕನಾ೯ಟಕ ರಾಜ್ಯಕ್ಕೆ ವಿಲೀನಗೊಂಡ ಸಂದಭ೯ದಲ್ಲಿಯೇ 10 ಲಕ್ಷ ರು. ತೆರಿಗೆ ನೀಡಿದ್ದ ಕೊಡಗಿನ ರಕ್ಷಣೆಗೆ ಎಲ್ಲರೂ ಮುಂದಾಗಬೇಕಾಗಿದೆ. ನಾಡಿಗೆ ಮಳೆ ಅಗತ್ಯವಾಗಿದೆ. ಆದರೆ ಮಳೆಯಿಂದ ಉಂಟಾಗುವ ಅನಾಹುತಗಳನ್ನು ತಡೆಗಟ್ಟಲೇಬೇಕಾಗಿದೆ. ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಲು ಸಾಧ್ಯ ಎಂದು ಯೋಜನೆ ರೂಪಿಸುತ್ತೇವೆ ಎಂದು ಹೇಳಿದರು.
ಕಳೆದ ವಷ೯ ರಾಜ್ಯದಲ್ಲಿ ಸಂಭವಿಸಿದ ಪ್ರಾಕೖತ್ತಿಕ ವಿಕೋಪ ಸಂತ್ರಸ್ಥರಿಗೇ ಇನ್ನೂ ರಾಜ್ಯ ಸಕಾ೯ರ ಭರವಸೆ ನೀಡಿದ್ದ ಪರಿಹಾರ ಇನ್ನೂ ನೀಡಿಲ್ಲ. ಶಾಸಕರು, ಸಂಸದರಿಗೆ ಈ ಬಗ್ಗೆ ಪ್ರಶ್ನಿಸಲೂ ಸಾಧ್ಯವಾಗದ ಅಸಾಹಯಕ ಸ್ಥಿತಿಯಿದೆ. ರಾಜ್ಯದಲ್ಲಿ ಕೋರೋನಾ ಮತ್ತು ಮಳೆಹಾನಿ ಪರಿಸ್ಥಿತಿಯನ್ನು ಸಮಥ೯ವಾಗಿ ನಿವ೯ಹಿಸುವಲ್ಲಿ ಸಕಾ೯ರ ಸಂಪೂಣ೯ ವಿಫಲವಾಗಿದೆ ಎಂದೂ ಶಿವಕುಮಾರ್ ಆರೋಪಿಸಿದರು.
ಇದನ್ನೂ ಓದಿ: ಕಾಂಗ್ರೆಸ್ ತನ್ನ ಅಸ್ತಿತ್ವಕ್ಕಾಗಿ ಹಿಂದೂತ್ವವನ್ನು ಒಪ್ಪಿಕೊಳ್ಳಬೇಕು: ಆರ್ ಧರ್ಮಸೇನಾ