ಪ್ರಾಣ ಉಳಿಸಲು ಹೊರಟವನಿಗೆ ಬಂತು ಜೀವಕ್ಕೆ ಕುತ್ತು : ಮರಕ್ಕೆ ಅಂಬ್ಯುಲೆನ್ಸ್ ಡಿಕ್ಕಿ

ಮರಕ್ಕೆ ಅಂಬ್ಯುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಚಾಲಕನಿಗೆ ಗಂಭೀರ ಗಾಯಗೊಂಡ ಘಟನೆ ಕೋಲಾರದ ಶ್ರೀನಿವಾಸಪುರ ತಾಲೂಕಿನ ರೋಣೂರು ಕ್ರಾಸ್ ಬಳಿ ನಡೆದಿದೆ.

ಮಂಜುನಾಥ್ ಗಾಯಗೊಂಡ ಚಾಲಕ. ಎದುರು ಬರ್ತಿದ್ದ ದ್ವಿಚಕ್ರ ವಾಹನ ತಪ್ಪಿಸಲು ಹೋಗಿ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನ ತಪ್ಪಿಸುವ ಬರದಲ್ಲಿ ಪಕ್ಕದಲ್ಲಿಯೇ ಇದ್ದ ಬಸ್ ನಿಲ್ದಾದ ಪ್ರಯಾಣಿಕರಿಗೆ ಡಿಕ್ಕಿ ಹೊಡೆಯಬೇಕಿದ್ದ ಆಂಬ್ಯುಲೆನ್ಸ್ ವಾಹನ, ಪ್ರಯಾಣಿಕರನ್ನ ತಪ್ಪಿಸಲು ಹೋಗಿ ಸ್ವಯಂ ಮರಕ್ಕೆ ಡಿಕ್ಕಿ ಹೊಡೆದಿದೆ.

ಮರಕ್ಕೆ ಗುದ್ದಿದ ರಬಸಕ್ಕೆ ಚಾಕಲ ಗಂಭೀರವಾಗಿ ಗಾಯಗೊಂಡಿದ್ದ ಚಾಲಕನನ್ನು  ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights