ಬಿಎಸ್‌ಎನ್‌ಎಲ್‌ ಸಂಸ್ಥೆಯಲ್ಲಿರುವವರು ದೇಶದ್ರೋಹಿಗಳು: ಅನಂತ್‌ ಕುಮಾರ್ ಹೆಗ್ಡೆ ವಿವಾದಾತ್ಮಕ ಹೇಳಿಕೆ

ಬಿಎಸ್ಎನ್ಎಲ್ ಸಂಸ್ಥೆಯಲ್ಲಿ ಇರುವವರು ದೇಶದ್ರೋಹಿಗಳು, ಆ ಸಂಸ್ಥೆಯ ತುಂಬಾ ದೇಶದ್ರೋಹಿಗಳೇ ತುಂಬಿಕೊಂಡಿದ್ದಾರೆ ಎಂದು ಸಂಸದ ಅನಂತ್ ಕುಮಾರ್ ಹೆಗ್ಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬಿಎಸ್‍ಎನ್‍ಎಲ್ ಸಂಸ್ಥೆಯಲ್ಲಿರುವವರು ದೇಶದ್ರೋಹಿಗಳು, ಆ ಸಂಸ್ಥೆಯನ್ನು ಸರಿಪಡಿಸಲು ನಮ್ಮ ಸರ್ಕಾರದಿಂದಲೂ ಸಾಧ್ಯವಾಗಿಲ್ಲ ಎಂದು ಅನಂತ್‌ ಕುಮಾರ್ ಹೆಗ್ಡೆ ಕುಮಟಾದಲ್ಲಿ ಹೇಳಿದ್ದಾರೆ.

ಸಮರ್ಪಕ ಸೇವೆ ನೀಡುವುದು ಬಿಎಸ್‍ಎನ್‍ಎಲ್ ನೌಕರರಿಂದ ಸಾಧ್ಯವಿಲ್ಲ. ಈಗಾಗಲೇ 85 ಸಾವಿರ ನೌಕರರನ್ನು ಮನೆಗೆ ಕಳುಹಿಸಿದ್ದೇವೆ, ಮುಂದಿನ ದಿನಗಳಲ್ಲಿ ಮತ್ತಷ್ಟು ನೌಕರರನ್ನು ಮನೆಗೆ ಕಳುಹಿಸಿ ಸಂಸ್ಥೆಯನ್ನು ಖಾಸಗೀಕರಣ ಗೊಳಿಸುತ್ತೇವೆ ಎಂದು ಹೇಳಿದ್ದಾರೆ.

ಎಲ್ಲ ಸೌಕರ್ಯಗಳಿದ್ದರೂ ಸಂಸ್ಥೆಯ ನೌಕರರು ಕೆಲಸ ಮಾಡುವುದಿಲ್ಲ, ಮುಂದಿನ ದಿನಗಳಲ್ಲಿ ಬಿಎಸ್‍ಎನ್‍ಎಲ್ ಸಂಸ್ಥೆಯನ್ನು ಸ್ಥಗಿತಗೊಳಿಸುತ್ತೇವೆ ಎಂದಿದ್ದಾರೆ. ಬಿಎಸ್‍ಎನ್‍ಎಲ್ ಎಂಬ ಸಂಸ್ಥೆಯನ್ನು ಖಾಸಗೀಕರಣ ಗೊಳಿಸುತ್ತೇವೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿಮಹಿಳಾ ಸಬಲೀಕರಣಗೊಳಿಸುವ ಸರ್ಕಾರದ ಯೋಜನೆಗಳಿಗೆ ಬ್ಯಾಂಕರ್‌ಗಳ ಬೆಂಬಲ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights