ಬಿಎಸ್ ವೈ ಗೆ ಮತ್ತೊಂದು ತಲೆಬಿಸಿ : ಖಾತೆ ಹಂಚಿಕೆಯಲ್ಲೂ ಅಸಮಾಧಾನ

ಸಂಪುಟ ವಿಸ್ತರಣೆ ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮತ್ತೊಂದು ತಲೆಬಿಸಿ ಶುರುವಾಗಿದೆ. ಹೀಗಾಗಿ ಅಳೆದು ತೂಗಿ ಖಾತೆ ಹಂಚಿಕೆ ಮಾಡಲು ಸಿಎಂ ತೀರ್ಮಾನ ಕೈಗೊಂಡಿದ್ದಾರೆ.

ಬೆಂಗಳೂರು ನಗರಾಭಿವೃದ್ಧಿ, ನೀರಾವರಿ, ಇಂಧನ, ಲೋಕೋಪಯೋಗಿ ಇಲಾಖೆ, ಕಂದಾಯ, ಗ್ರಾಮೀಣಾಭಿವೃದ್ಧಿ ಸೇರಿದಂತೆ ಪ್ರಮುಖ ಖಾತೆಗಳ ಮೇಲೆ ಹಲವು ಸಚಿವರು ಕಣ್ಣಿಟ್ಟಿದ್ದಾರೆ. ಸಚಿವ ಸಂಪುಟ ವಿಸ್ತರಣೆಗೆ ಹಲವು ಶಾಸಕರಿಂದ ಅಸಮಾಧಾನ ವ್ಯಕ್ತವಾಗಿದೆ. ಈಗ ಖಾತೆ ಹಂಚಿಕೆಯಲ್ಲೂ ಅಸಮಾಧಾನ ಆದರೆ ಕಷ್ಟ. ಹೀಗಾಗಿ ಸಿಎಂ ಎಚ್ಚರಿಕೆ ನಿರ್ಧಾರ ಕೈಗೊಳ್ಳಲು ಮುಂದಾಗಿದ್ದಾರೆ ಎನ್ನಲಾಗಿದೆ.

ಹಿರಿಯ ಶಾಸಕರನ್ನು ಸರಿದೂಗಿಸಿಕೊಂಡು ಹೋಗಲು, ಖಾತೆ ಹಂಚಿಕೆಯಲ್ಲಿ ಅಸಮಾಧಾನವಾಗದಂತೆ ನೋಡಿಕೊಳ್ಳಲು ಸಿಎಂ ಪ್ಲಾನ್ ಮಾಡಿದ್ದಾರೆ. 2 ದಿನ ನೆರೆ ಹಾನಿ ಪ್ರದೇಶಗಳಿಗೆ ಸಚಿವರನ್ನು ಕಳಿಸಿದ್ದಾರೆ. ಅವರು ಬಂದ ಕೂಡಲೇ ಖಾತೆ ಹಂಚಿಕೆ ಮಾಡಲಿದ್ದಾರೆ ಎನ್ನಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights