ಬಿಜೆಪಿಯ ಕೆಲವರು ಕಾಂಗ್ರೆಸ್ ಸೇರಲಿದ್ದಾರೆ : ಸತೀಶ್ ಜಾರಕಿಹೊಳಿ ಹೊಸ ಬಾಂಬ್..!

ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಪಕ್ಷ ಅಧಿಕಾರದಲ್ಲಿದ್ದಾಗ ಕೆಲ ಅತೃಪ್ತರು ಬಿಜೆಪಿ ಸರ್ಕಾರ ಸೇರಿ ಸದ್ಯ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಈಗ ಮತ್ತೆ ಬಿಜೆಪಿಯ ಕೆಲವರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೊಸ ಹೇಳಿಕೆ ನೀಡಿ ಸಂಚಲನ ಮೂಡಿಸಿದ್ದಾರೆ.

ಹೌದು…  ಬಿಜೆಪಿಯ ಕೆಲವರು ಕಾಂಗ್ರೆಸ್ ಸೇರ್ಪಡೆ ಕುರಿತು ಈಗಾಗಲೇ ಹೈಕಮಾಂಡ್‍ಗೆ ಅಪ್ರೋಚ್ ಮಾಡಿದ್ದಾರೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಕೆಲವರು ಈಗಾಗಲೇ ಕಾಂಗ್ರೆಸ್ ಸೇರ್ಪಡೆ ಕುರಿತು ಹೈಕಮಾಂಡ್ ಸಂಪರ್ಕಿಸಿದ್ದಾರೆ. ಉಪಚುನಾವಣೆಗೆ ಬಿಜೆಪಿಯಲ್ಲಿ ಟಿಕೆಟ್ ಸಿಗದ ಕೆಲವರು ನಮ್ಮ ಹೈಕಮಾಂಡ್ ಜತೆಗೆ ಮಾತುಕತೆ ನಡೆಸಿದ್ದಾರೆ. ಹೈಕಮಾಂಡ್ ಮತ್ತು ನಮ್ಮ ಜತೆಗೆ ಬಿಜೆಪಿಯ ಕೆಲವರು ಸಂಪರ್ಕದಲ್ಲಿದ್ದಾರೆ. ಆಯಾ ಕ್ಷೇತ್ರದ ಆಗುಹೋಗು ನೋಡಿಕೊಂಡು ಪಕ್ಷಕ್ಕೆ ಸೇರಿಸಿಕೊಳ್ಳುವ ಚಿಂತನೆಯಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‍ಗೆ ಬಂದವರಿಗೆ ಹೈಕಮಾಂಡ್ ಟಿಕೆಟ್ ಕೊಡಬಹುದು. ಅವರಿಗೂ ಸಹ ಶಕ್ತಿ ಇರುತ್ತದೆ. ಆದಷ್ಟು ಬೇಗ ಉಪಚುನಾವಣೆಯ ಅಭ್ಯರ್ಥಿ ಆಯ್ಕೆ ಪಟ್ಟಿ ಘೋಷಣೆ ಮಾಡಿ ಎಂದು ಹೇಳಿದ್ದೇವೆ. ಗೋಕಾಕ್ ಉಪಚುನಾವಣೆ ಕುರಿತು ಸಹ ಈಗಾಗಲೇ ಎರಡನೇ ಹಂತದ ಪ್ರಚಾರ ಆರಂಭವಾಗಿದೆ. ಸನ್ನಿವೇಶಕ್ಕೆ ತಕ್ಕಂತೆ ಗೋಕಾಕ್ ಲೂಟಿ ಮಾಡಿದವರ ಕುರಿತು ಹಾಡು ಮಾಡಿದ್ದೇವೆ. ಜನ ಅಳುತ್ತಿದ್ದಾರೆ ಇನ್ನೊಂದು ಕಡೆ ಕೆಲವು ನಗರ ಸಭೆ ಸದಸ್ಯರು, ಮುಖಂಡರು ಸೇರಿ ಲೂಟಿ ಮಾಡುತ್ತಿದ್ದಾರೆ. ಎಂಟು ಸಾವಿರ ಮಣ್ಣಿನ ಟ್ರಿಪ್ ಲೂಟಿ ಮಾಡಿದ್ದಾರೆ ಎಂದು ಕಿಡಿಕಾರಿದರು.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights