ಬೆಂಗಳೂರಿನಲ್ಲಿ ದುಷ್ಕರ್ಮಿಗಳ ಅಟ್ಟಹಾಸ : ರಾತ್ರೋರಾತ್ರಿ ಕಾರುಗಳ ಗಾಜು ಪುಡಿಪುಡಿ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದುಷ್ಕರ್ಮಿಗಳು ಮತ್ತೊಮ್ಮೆ ಪುಂಡಾಟ ಮೆರೆದಿದ್ದಾರೆ. ತಡರಾತ್ರಿ ಮನೆಯ ಮುಂದೆ ನಿಲ್ಲಿಸಿದ್ದ ಕಾರುಗಳ ಗಾಜುಗಳನ್ನು ಒಡೆದು ಹಾಕಿದ್ದಾರೆ.
ವಿಜಯನಗರದ ಸಂಪಿಗೆ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ದ್ವಿಚಕ್ರ ವಾಹನದಲ್ಲಿ ಬಂದ ಮೂವರು 13 ಕಾರುಗಳ ಗಾಜು ಒಡೆದಿದ್ದಾರೆ. ಸಿಸಿ ಟಿವಿಯಲ್ಲಿ ಈ ದುಷ್ಕೈತ್ಯ ಸೆರೆಯಾಗಿದ್ದು, ಪ್ರಕರನ ದಾಖಲಿಸಿಕೊಂಡಿರುವ ವಿಜಯನಗರ ಠಾಣೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.