ಬೆಂಗಳೂರಿನಲ್ಲಿ ಮತ್ತೊಬ್ಬ ರೌಡಿಶೀಟರ್ ಹತ್ಯೆ : ಬೆಚ್ಚಿಬಿದ್ದ ಸಿಲಿಕಾನ್ ಮಂದಿ!
ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್ ಒಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಶನಿವಾರ ರಾತ್ರಿ ಕೆ.ಜಿ.ಹಳ್ಳಿಯಲ್ಲಿ ನಡೆದಿದೆ.
ಹೌದು.. ಕೆ.ಜಿ.ಹಳ್ಳಿಯ ನ್ಯೂ ಬಾಗಲೂರು ಲೇಔಟ್ ನ ರೌಡಿಶೀಟರ್ ಬುಜ್ಜು (30) ಮನೆ ಬಳಿಯೇ ಮಾರಕಾಸ್ತ್ರಗಳಿಂದ ಹತ್ಯೆಗೈದು ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಕೊರೊನಾ ಲಾಕ್ ಡೌನ್ ನಡುವೆಯೂ ಈ ಕೃತ್ಯ ನಡೆದಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಜೊತೆಗೆ ಹಳೆಯ ದ್ವೇಷ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ.
ಹತ್ಯೆಯಾಗಿದ್ದ ರೌಡಿಶೀಟರ್ ಬುಜ್ಜು, ಡ್ಯಾನಿಯಲ್ ಸಂಬಂಧಿ ಸ್ಟಾಲಿನ್ ಕೊಲೆಯಲ್ಲಿ ಭಾಗಿಯಾಗಿದ್ದ. ಈ ಮಧ್ಯೆ ಸ್ಟಾಲಿನ್ ಬೆಂಬಲಿಗರು ಬುಜ್ಜು ಸಹೋದರ ವಿನೋದ್ ನನ್ನು ಕೊಲೆ ಮಾಡಿದ್ದರು. ಅನಂತರ ಇಬ್ಬರು ಸಂಧಾನ ಮಾಡಿಕೊಂಡಿದ್ದರು. ಅದರ ಬೆನ್ನಲ್ಲೇ ಬುಜ್ಜು ಕೊಲೆಯಾಗಿದೆ ಎನ್ನಲಾಗುತ್ತಿದ್ದು, ಕೆ.ಜಿ.ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಕೆಜಿ ಹಳ್ಳಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.