ಬೆಂಗಳೂರಿನಲ್ಲಿ ಮತ್ತೊಬ್ಬ ರೌಡಿಶೀಟರ್ ಹತ್ಯೆ : ಬೆಚ್ಚಿಬಿದ್ದ ಸಿಲಿಕಾನ್ ಮಂದಿ!

ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್ ಒಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಶನಿವಾರ ರಾತ್ರಿ ಕೆ.ಜಿ.ಹಳ್ಳಿಯಲ್ಲಿ ನಡೆದಿದೆ.

ಹೌದು..  ಕೆ.ಜಿ.ಹಳ್ಳಿಯ ನ್ಯೂ ಬಾಗಲೂರು ಲೇಔಟ್ ನ ರೌಡಿಶೀಟರ್ ಬುಜ್ಜು (30) ಮನೆ ಬಳಿಯೇ ಮಾರಕಾಸ್ತ್ರಗಳಿಂದ ಹತ್ಯೆಗೈದು ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಕೊರೊನಾ ಲಾಕ್ ಡೌನ್ ನಡುವೆಯೂ ಈ ಕೃತ್ಯ  ನಡೆದಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಜೊತೆಗೆ ಹಳೆಯ ದ್ವೇಷ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ.

ಹತ್ಯೆಯಾಗಿದ್ದ ರೌಡಿಶೀಟರ್ ಬುಜ್ಜು, ಡ್ಯಾನಿಯಲ್ ಸಂಬಂಧಿ ಸ್ಟಾಲಿನ್ ಕೊಲೆಯಲ್ಲಿ ಭಾಗಿಯಾಗಿದ್ದ. ಈ ಮಧ್ಯೆ ಸ್ಟಾಲಿನ್ ಬೆಂಬಲಿಗರು ಬುಜ್ಜು ಸಹೋದರ ವಿನೋದ್ ನನ್ನು ಕೊಲೆ ಮಾಡಿದ್ದರು. ಅನಂತರ ಇಬ್ಬರು ಸಂಧಾನ ಮಾಡಿಕೊಂಡಿದ್ದರು.‌ ಅದರ ಬೆನ್ನಲ್ಲೇ ಬುಜ್ಜು ಕೊಲೆಯಾಗಿದೆ ಎನ್ನಲಾಗುತ್ತಿದ್ದು, ಕೆ.ಜಿ.ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಕೆಜಿ ಹಳ್ಳಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights