ಬೆಂಗಳೂರು ಮಹಾನಗರ ಪಾಲಿಕೆಯ 12 ಸ್ಥಾಯಿ ಸಮಿತಿಯ ಚುನಾವಣೆ ಮುಂದೂಡಿಕೆ…

ನಾಮ ಪತ್ರ ಸಲ್ಲಿಕೆಯಾಗದ ಹಿನ್ನಲೆಯಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯ 12 ಸ್ಥಾಯಿ ಸಮಿತಿಯ ಚುನಾವಣೆಯನ್ನು ಮುಂದೂಡಲಾಗಿದೆ.
ಇಂದು ಟೌನ್ ಹಾಲ್ ನಲ್ಲಿ ಬಿಬಿಎಂಪಿಯ 12 ಸ್ಥಾಯಿ ಸಮಿತಿಯ ಚುನಾವಣೆ ನಡೆಯಬೇಕಿತ್ತು. ಆದರೆ 3 ಪಕ್ಷದವರು ನಾಮ ಪತ್ರ ಸಲ್ಲಿಕೆ ಮಾಡದ ಹಿನ್ನಲೆಯಲ್ಲಿ  ಸ್ಥಾಯಿ ಸಮಿತಿಯ ಚುನಾವಣೆಯನ್ನು ಮುಂದೂಡಲಾಗಿದೆ.ಇಂದು ಬೆಳಿಗ್ಗೆ 9.30ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಆದರೆ ಪಕ್ಷಗಳು ಉಪಚುನಾವಣೆಯ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಕಾರಣ ನಾಮ ಪತ್ರ ಸಲ್ಲಿಕೆ ಮಾಡಲಿಲ್ಲ ಎನ್ನಲಾಗಿದೆ.

ಸ್ಥಾಯಿ ಸಮಿತಿಗಳ ಅವಧಿ ಡಿಸೆಂಬರ್ 5ಕ್ಕೆ ಮುಕ್ತಾಯವಾಗಲಿದೆ. ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತ ಹರ್ಷಗುಪ್ತ ಡಿಸೆಂಬರ್ 4ರಂದು ಚುನಾವಣೆ ನಡೆಸಲು ಸಿದ್ಧತೆ ಅಭ್ಯರ್ಥಿಗಳ ಆಯ್ಕೆ ನಡೆಸಿದೆ. ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಚುನಾವಣೆ ಹಾಜರಾಗದಿರಲು ತೀರ್ಮಾನಿಸಿದ್ದು, ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡಲಾಗಿದೆ.

ಹಿಂದೆಯೇ ಚುನಾವಣೆ ಮುಂದೂಡುವಂತೆ ಪ್ರಾದೇಶಿಕ ಆಯುಕ್ತರಿಗೆ ಮೂರು ಪಕ್ಷಗಳ ನಾಯಕರು ಮನವಿ ಮಾಡಿದ್ದರು. ಆದರೆ ಪ್ರಾದೇಶಿಕ ಆಯುಕ್ತರು ಮನವಿಯನ್ನು ತಿರಸ್ಕರಿಸಿ ಚುನಾವಣೆ ನಡೆಸಲು ಮುಂದಾಗಿದ್ದರು.

ಮೇಯರ್ ಆಯ್ಕೆ ಸಂದರ್ಭದಲ್ಲೇ ಬಿಬಿಎಂಪಿಯ ಸ್ಥಾಯಿ ಸಮಿತಿ ಸದಸ್ಯರ ಆಯ್ಕೆಗೆ ನಡೆಸಬೇಕಾಗಿದ್ದ ಚುನಾವಣೆ ಗೊಂದಲದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿತ್ತು. ಅಲ್ಲದೇ ಒಂಬತ್ತು ಸ್ಥಾಯಿ ಸಮಿತಿಗಳ ಚುನಾವಣೆಗೆ ಕೋರ್ಟ್ ತಡೆ ನೀಡಿ, ಅವಧಿ ಪೂರ್ಣಗೊಳ್ಳುವವರೆಗೂ ಚುನಾವಣೆ ನಡೆಸದಂತೆ ತಿಳಿಸಿತ್ತು. ಇದೀಗ ಮತ್ತೆ ಚುನಾವಣೆಯನ್ನು ಮುಂದೂಡಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights