ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ…
ಪೌರತ್ವ ಕಾಯ್ದೆ ವಿರೋಧಿಸಿ ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿರುವುದರಿಂದ ಮುಂಜಾಗೃತ ಕ್ರಮವಾಗಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡಿಸೆಂಬರ್ 21ರವರೆಗೂ ನಿಷೇಧಾಜ್ಞೆ ಹೇರಲಾಗಿದೆ.
ಬೆಂಗಳೂರಿನಲ್ಲಿ (ಡಿಸೆಂಬರ್ 18) ಇಂದಿನಿಂದಲೇ 144 ಸೆಕ್ಷನ್ ಜಾರಿಯಾಗಿದ್ದು, ಡಿಸೆಂಬರ್ 21 ರ ರಾತ್ರಿ 12 ರ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆಗೆ ಹಲವು ಸಂಘಟನೆಗಳು ಕರೆ ನೀಡಿರುವ ಕಾರಣ, ಪ್ರತಿಭಟನೆ ನಡೆಸದಂತೆ ತಡೆಯಲು ಈ ಕ್ರಮ ಜರುಗಿಸಲಾಗಿದೆ.
ಬೆಂಗಳೂರು, ಮೈಸೂರು, ಚಿಕ್ಕಬಳ್ಳಾಪುರ, ಮಂಗಳೂರು, ಹಾಸನ, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ತುಮಕೂರು, ಬಾಗಲಕೋಟೆ, ದಾವಣಗೆರೆ ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಘೋಷಿಸಲಾಗಿದೆ.