ಬೈಕ್, ಲಾರಿ ಮಧ್ಯೆ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು…!
ಬೈಕ್ ಮತ್ತು ಲಾರಿ ಮಧ್ಯೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಾಗಲಕೋಟೆಯ ಹುನ್ನೂರು ಬಸ್ ನಿಲ್ದಾಣದ ಬಳಿ ನಡೆದಿದೆ.
ಕಿರಣ್ ಜೊಂಗನ್ನವರ(೨೮) ಮೃತ ದುರ್ದೈವಿ. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಹುನ್ನೂರು ಗ್ರಾಮದಲ್ಲಿ ಮಧುರಖಂಡಿ ಗ್ರಾಮದ ನಿವಾಸಿ ಕಿರಣ್ ಜೊಂಗನ್ನವರ್ ಕೆಲಸಕ್ಕೆಂದು ಬೈಕ್ ನಲ್ಲಿ ಜಮಖಂಡಿ ನಗರಕ್ಕೆ ತೆರಳಿತ್ತಿದ್ದರು. ಈ ವೇಳೆ ಬೈಕ್ ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಯಾರ ತಪ್ಪು ಎಂದು ತಿಳಿದು ಬಂದಿಲ್ಲ. ಆದರೆ ಬೈಕ್ ಸವಾರ ಕಿರಣ್ ಮಾತ್ರ ಸ್ಥಳದಲ್ಲೇ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.
ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.