ಭಾಷಾಂತರ ನಿರ್ದೇಶನಾಲಯದ ನಿರ್ದೇಶಕರಾಗಿ ಎಂ ವೇಕಟೇಶ್ ನೇಮಕ!
ಕರ್ನಾಟಕ ಸರ್ಕಾರದ ಭಾಷಾಂತರ ನಿರ್ದೇಶನಾಲಯದ ನೂತನ ನಿರ್ದೇಶಕರನ್ನಾಗಿ ಎಂ ವೆಂಕಟೇಶ್ ಅವರನ್ನು ಸರ್ಕಾರ ನೇಮಕ ಮಾಡಿದೆ.
ಈ ಕುರಿತು ಆದೇಶ ಹೊರಡಿಸಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು, ಕರ್ನಾಟಕ ಹೈಕೋರ್ಟ್ನ ತೀರ್ಪುಗಾರ ವರದಿ ಮಂಡಳಿಯ ಮಖ್ಯ ಭಾಷಾಂತರಕಾರರಾಗಿ ಸೇವೆ ಸಲ್ಲಿಸುತ್ತಿದ್ದ ಎಂ ವೆಂಕಟೇಶ್ ಅವರನ್ನು ಭಾಷಾಂತರ ನಿರ್ದೇಶನಾಲಯದ ನಿರ್ದೇಶಕರಾಗಿ ಪದೋನ್ನತಿ ಮಾಡಿದೆ.
1995ರಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ವೆಂಕಟೇಶ್ ಅವರು, ಚಿನ್ನದ ಪದಕ ಗೆದ್ದಿದ್ದರು. ನಂತರ ಕರ್ನಾಟಕ ಸರ್ಕಾರದ ಭಾಷಾಂತರ ನಿರ್ದೇಶನಾಲಯಲ್ಲಿ ಭಾಷಾಂತರಕಾರರಾಗಿ ಸೇವೆ ಆರಂಭಿಸಿದ್ದರು. ನಂತರ, ಕರ್ನಾಟಕ ಸರ್ಕಾರದಲ್ಲಿ ಸಂಶೋಧಕರಾಗಿ, ಸಹಾಯಕ ನಿರ್ದೇಶಕರಾಗಿ, ವಿಧಾನ ಪರಿಷತ್ ಅಧೀನ ಕಾರ್ಯದರ್ಶಿಯಾಗಿ, ಉಪ ನಿರ್ದೇಶಕರಾಗಿ ಹಾಗೂ ಪ್ರಸ್ತುತ ಹೈಕೋರ್ಟ್ ತೀರ್ಪುಗಳ ವರದಿ ಮಂಡಳಿಯಲ್ಲಿ ಮುಖ್ಯ ಭಾಷಾಂತರಕಾರರಾಗಿ ಸೇವೆ ಸಲ್ಲಿಸುತ್ತಿದ್ದರು.
ಎಂ ವೆಂಕಟೇಶ್ ಅವರನ್ನು ಇಂದಿನಿಂದ ಭಾಷಾಂತರ ನಿರ್ದೇಶನಾಲಯದ ನಿರ್ದೇಕರರಾಗಿ ನೇಮಿಸಿ ಆದೇಶಿಸಲಾಗಿದೆ.