ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ವ್ಯಕ್ತಿ ಪೊಲೀಸರಿಗೆ ಶರಣು..!

ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಇಟ್ಟ ವ್ಯಕ್ತಿ ಪೊಲೀಸರಿಗೆ ಶರಣಾಗಿದ್ದಾನೆ.

ಹೌದು… ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಚ್ಚಾ ಬಾಂಬ್ ಇಟ್ಟು ಆತಂಕ ಸೃಷ್ಟಿಸಿದ್ದ ಬಾಂಬರ್ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಶಂಕಿತ ಆರೋಪಿ ಆದಿತ್ಯ ರಾವ್ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಐಜಿಪಿ ನೀಲಮಣಿರಾಜು ಅವರ ಎದುರು ಬುಧವಾರ ಬೆಳಿಗ್ಗೆ ಸುಮಾರು 8.40ರ ಸುಮಾರಿಗೆ ಶರಣಾಗಿದ್ದಾನೆ.

ಪೊಲೀಸ್ ಮೂಲಗಳ ಪ್ರಕಾರ ಮಣಿಪಾಲ ಮೂಲದ ಆದಿತ್ಯ ರಾವ್ ಎಂಬಾತ ‘ಬಾಂಬ್ ಇಟ್ಟಿದ್ದು ನಾನೇ’ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಅವರ ಕಚೇರಿಗೆ ಆಗಮಿಸಿ ಶರಣಾಗಿ ತಮ್ಮ ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಪ್ರಸ್ತುತ ಆರೋಪಿಯನ್ನು ಹಲಸೂರುಗೇಟ್ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಠಾಣೆಯ ಇನ್‌ಸ್ಟೆಕ್ಟರ್ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಯನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಆರೋಪಿ ಉಡುಪಿಯ ನಿವಾಸಿ. ಇಂಜಿನೀಯರಿಂಗ್ ಪದವಿ ಪಡೆದ ಈತ ವಿಮಾನ ನಿಲ್ದಾಣದಲ್ಲಿ ಕೆಲಸ ಸಿಕ್ಕಿಲ್ಲದೇ ಮಾನಸಿಕವಾಗಿ ತುಂಬಾನೇ ನೊಂದಿದ್ದ. ತಾಯಿ ಕೂಡ ಕ್ಯಾನ್ಸರ್ ನಿಂದ ಸಾವನ್ನಪ್ಪಿದ್ದರು ಎನ್ನಲಾಗುತ್ತಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights