ಮನನೊಂದು ಯುವಕ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ….!

ಯುವಕ ಮನನೊಂದು ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಮಖಂಡಿ ತಾಲೂಕಿನ ಹಿರೇಪಡಸಲಗಿ ಗ್ರಾಮದಲ್ಲಿ ನಡೆದಿದೆ.

ಚೇತನ್ ಉಪಾಧ್ಯೆ (22) ಆತ್ಮಹತ್ಯೆಗೆ ಶರಣಾದ ಯುವಕ. ಪೋಷಕರು ಮೊಬೈಲ್ ಬಳಕೆ ಮಾಡಬೇಡವೆಂದು ಬುದ್ದಿವಾದ ಹೇಳಿದ್ದಕ್ಕೆ ಮನನೊಂದಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸೆಪ್ಟೆಂಬರ್ ೨೨ರಂದು ಮನೆಯಿಂದ ಕಾಣೆಯಾಗಿದ್ದ ಯುವಕ, ಇವತ್ತು ಕಾಣೆಯಾಗಿದ್ದ ಯುವಕ ಶವವಾಗಿ  ಹಿರೇಪಡಸಲಗಿ ಗ್ರಾಮದ ಬಳಿಯ ಕೃಷ್ಣಾ ನದಿಯ ಬಿದರಿ ಹಳ್ಳ ಎಂಬಲ್ಲಿ ಪತ್ತೆಯಾಗಿದ್ದಾನೆ.

ಬಾಗಲಕೋಟೆ ಜಮಖಂಡಿ ತಾಲೂಕಿನ ನಾಗನೂರ ಗ್ರಾಮದ ಯುವಕ ಎನ್ನಲಾಗುತ್ತಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ವಿಚಾರಣೆ ನಡೆಸಿದ್ದಾರೆ.  ಸಾವಳಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights