ಮನೆ ಬಾಗಿಲಿಗೆ ಮದ್ಯ, ಸಚಿವ ಹೆಚ್.ನಾಗೇಶ್ ಯೋಜನೆ : ಸಿಎಂ ಕಿಡಿ

ಮನೆ ಬಾಗಿಲಿಗೆ ಮದ್ಯ ಯೋಜನೆಯನ್ನು ಜಾರಿಗೆ ತರಲು ಕರ್ನಾಟಕ ಅಬಕಾರಿ ಇಲಾಖೆ ಚಿಂತನೆ ನಡೆಸಿದೆ ಎಂದು ಅಬಕಾರಿ ಸಚಿವ ಹೆಚ್.ನಾಗೇಶ್ ಹೇಳಿದ್ದಾರೆ.

ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಈ ವಿಷಯ ತಿಳಿಸಿದರು. ಇದೇ ವೇಳೇ ಅವರು ಮಾತನಾಡಿ, ಕೆಲವು ಕಡೆ ಮದ್ಯದ ಅಂಗಡಿ ದೂರ ಇರುತ್ತೆ. ಕೆಲವು ಕಡೆ ಮದ್ಯದ ಅಂಗಡಿಗಳೇ ಇರಲ್ಲ ಹೀಗಾಗಿ ಈ ಸಮಸ್ಯೆಗೆ ಪರಿಹಾರಕಂಡುಕೊಳ್ಳುವ ನಿಟ್ಟಿನಲ್ಲಿ ನಾವು ಮುಂದಾಗಿದ್ದು, ಮನೆ ಬಾಗಿಲಿಗೆ ಮದ್ಯ ಪೂರೈಸೋ ಚಿಂತನೆ ಕೂಡ ಇಲಾಖೆ ಮುಂದಿದೆ ಎಂದು ಹೇಳಿದರು.

ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗರಂ ಅಗಿದ್ದಾರೆ ಎನ್ನಲಾಗಿದ್ದು, ಸಚಿವರಿಗೆ ಕರೆ ಮಾಡಿದ ಸಿಎಂ , ನಿಮಗೆ ಈ ಯೋಜನೆ ಬಗ್ಗೆ ಮಾತನಾಡಲು ಹೇಳಿದ್ದು ಯಾರು? ನಿಮ್ಮ ಚಿಂತನೆ ನಿಮ್ಮಲ್ಲೇ ಇಟ್ಟುಕೊಳ್ಳಿ, ನಿಮ್ಮ ಹೇಳಿಕೆ ವಿವಾದಿಂದ ಕೂಡಿದೆ. ಕೂಡಲೇ ಸುದ್ದಿಗೋಷ್ಠಿ ಕರೆದು ಇದರ ಬಗ್ಗೆ ಸ್ಪಷ್ಟನೆ ನೀಡಿ ಎಂದು ಸೂಚಿಸಿದ್ದಾರೆ ಎನ್ನಲಾಗಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights