ಮನೆ ಬಾಗಿಲಿಗೆ ಮದ್ಯ, ಸಚಿವ ಹೆಚ್.ನಾಗೇಶ್ ಯೋಜನೆ : ಸಿಎಂ ಕಿಡಿ
ಮನೆ ಬಾಗಿಲಿಗೆ ಮದ್ಯ ಯೋಜನೆಯನ್ನು ಜಾರಿಗೆ ತರಲು ಕರ್ನಾಟಕ ಅಬಕಾರಿ ಇಲಾಖೆ ಚಿಂತನೆ ನಡೆಸಿದೆ ಎಂದು ಅಬಕಾರಿ ಸಚಿವ ಹೆಚ್.ನಾಗೇಶ್ ಹೇಳಿದ್ದಾರೆ.
ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಈ ವಿಷಯ ತಿಳಿಸಿದರು. ಇದೇ ವೇಳೇ ಅವರು ಮಾತನಾಡಿ, ಕೆಲವು ಕಡೆ ಮದ್ಯದ ಅಂಗಡಿ ದೂರ ಇರುತ್ತೆ. ಕೆಲವು ಕಡೆ ಮದ್ಯದ ಅಂಗಡಿಗಳೇ ಇರಲ್ಲ ಹೀಗಾಗಿ ಈ ಸಮಸ್ಯೆಗೆ ಪರಿಹಾರಕಂಡುಕೊಳ್ಳುವ ನಿಟ್ಟಿನಲ್ಲಿ ನಾವು ಮುಂದಾಗಿದ್ದು, ಮನೆ ಬಾಗಿಲಿಗೆ ಮದ್ಯ ಪೂರೈಸೋ ಚಿಂತನೆ ಕೂಡ ಇಲಾಖೆ ಮುಂದಿದೆ ಎಂದು ಹೇಳಿದರು.
ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗರಂ ಅಗಿದ್ದಾರೆ ಎನ್ನಲಾಗಿದ್ದು, ಸಚಿವರಿಗೆ ಕರೆ ಮಾಡಿದ ಸಿಎಂ , ನಿಮಗೆ ಈ ಯೋಜನೆ ಬಗ್ಗೆ ಮಾತನಾಡಲು ಹೇಳಿದ್ದು ಯಾರು? ನಿಮ್ಮ ಚಿಂತನೆ ನಿಮ್ಮಲ್ಲೇ ಇಟ್ಟುಕೊಳ್ಳಿ, ನಿಮ್ಮ ಹೇಳಿಕೆ ವಿವಾದಿಂದ ಕೂಡಿದೆ. ಕೂಡಲೇ ಸುದ್ದಿಗೋಷ್ಠಿ ಕರೆದು ಇದರ ಬಗ್ಗೆ ಸ್ಪಷ್ಟನೆ ನೀಡಿ ಎಂದು ಸೂಚಿಸಿದ್ದಾರೆ ಎನ್ನಲಾಗಿದೆ.