ಮಮತಾ ಮಾನಸಿಕ ಸಮತೋಲನವನ್ನು ಕಳೆದುಕೊಂಡಿದ್ದಾರೆ – ಕೈಲಾಶ್ ವಿಜಯವರ್ಗೀ

ಪೌರತ್ವ ಕಾಯ್ದೆ ವಿರುದ್ಧದ ಪ್ರತಿಭಟನೆ ಮುಂದುವರೆಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಮಾನಸಿಕ ಸಮತೋಲನವನ್ನು ಕಳೆದುಕೊಂಡಿದ್ದಾರೆಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮಮತಾ ಬ್ಯಾನರ್ಜಿಯವರು ಮಾನಸಿಕ ಸಮತೋಲನವನ್ನು ಕಳೆದಕೊಂಡಿದ್ದಾರೆ. ಪೌರತ್ವ ಕಾಯ್ದೆ ಬಳಿಕ ನುಸುಳುಕೋರರನ್ನು ಕಂಡು ಹಿಡಿಯಲಾಗುತ್ತಿದೆ. ಇದರಿಂದ ಅವರ ವೋಟ್ ಬ್ಯಾಂಕ್ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ಮಮತಾ ಮಾನಸಿಕ ಸಮತೋಲನವನ್ನು ಕಳೆದುಕೊಲ್ಳುತ್ತಿದ್ದಾರೆ. ಅವರಿಗೆ ವೈದ್ಯಕೀಯ ಚಿಕಿತ್ಸೆಯ ಅಗತ್ಯವಿದೆ ಎಂದು ಹೇಳಿದ್ದಾರೆ.

ರ್ಯಾಲಿಯೊಂದರಲ್ಲಿ ಮಾತನಾಡಿದ್ದ ಮಮತಾ, ಕಾಯ್ದೆ ವಾಪಸ್ ಪಡೆಯುವವರೆಗೂ ಯಾವುದೇ ಹೆದರಿಕೆಯಿಲ್ಲದೆ ನೀವು ಹೋರಾಟ ಮುಂದುವರೆಸಿ. ನಿಮ್ಮ ಜೊತೆ ನಾವಿದ್ದೇವೆಂದು ಅಭಯ ನೀಡಿದ್ದಾರೆ. ಅಲ್ಲದೆ, ಎಲ್ಲಾ ಪಕ್ಷಗಳಿಗೆ ಮಸಿ ಬಳಿಯಲು ಯತ್ನಿಸುತ್ತಿರುವ ಬಿಜೆಪಿ, ತಾನು ಮಾತ್ರ ಶ್ವೇತ ವರ್ಣ ಎಂಬಂತೆ ಬೀಗುತ್ತಿದೆ ಎಂದು ಹೇಳಿದ್ದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights