ಮಲಗಿದ್ದ ಮಗುವನ್ನು ಎಳೆದೊಯ್ದು ತಿಂದ ಚಿರತೆ : ಅರ್ಧ ದೇಹ ಪತ್ತೆ!

ಮನೆಯಲ್ಲಿ ಗಾಢ ನಿದ್ರೆ ಮಾಡುತ್ತಿದ್ದ ಮಗುವನ್ನು ಎಳೆದೊಯ್ದ ಚಿರತೆ ಮಗುವನ್ನು ತಿಂದು ಪರಾರಿಯಾಗಿದೆ.

ಹೌದು… ಮಲಗಿದ್ದ ಮಗುವನ್ನು ಅರ್ಧ ಭಾಗ ತಿಂದ ಧಾರುಣ ಘಟನೆ ರಾಮನಗರದಲ್ಲಿ ನಡೆದಿದೆ.  ಮೂರು ವರ್ಷದ ಹೇಮಂತ್‍ನನ್ನು ಚಿರತೆ ತಿಂದು ಸಾಯಿಸಿದೆ. ಚಂದ್ರಪ್ಪ ಹಾಗೂ ಮಂಗಳಗೌರಮ್ಮ ದಂಪತಿಯ ಪ್ರೀತಿಯ ಪುತ್ರನಾಗಿದ್ದಾನೆ. ಹೇಮಂತ್ ತನ್ನ ತಾತನ ಮನೆಗೆ ಬಂದಿದ್ದ ಸಂದರ್ಭದಲ್ಲಿ ಇಂದು ನಸುಕಿನ ಜಾವ ಸುಮಾರು 2 ಗಂಟೆಗೆ ಈ ಘಟನೆ ನಡೆದಿದೆ. ಮನೆ ಸಮೀಪದ ಕಾಡಿನಲ್ಲಿ ಮಗುವನ್ನು ತಿಂದು ಹೋಗಿದೆ. ಇದೀಗ ಮಗುವಿನ ಅರ್ಧ ದೇಹ ಮಾತ್ರ ಪತ್ತೆಯಾಗಿದೆ.

ಮಾಗಡಿ ತಾಲೂಕಿನ ಕದಿರಯ್ಯನಪಾಳ್ಯದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ತುಂಬಾ ಸೆಕೆ ಇದೆ ಎಂದು ಮನೆಯ ಬಾಗಿಲು ತೆರೆದು ಮಲಗಿದ್ದರು, ಎಲ್ಲರೂ ಗಾಢ ನಿದ್ರೆಯಲ್ಲಿದ್ದಾಗ ಚಿರತೆ ಬಂದು ಮಗುವನ್ನು ಎಳೆದೊಯ್ದಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ದೌಡಾಯಿಸಿದ್ದಾರೆ. ಬಳಿಕ ಮಗುವಿಗಾಗಿ ಹುಡುಕಾಟ ಶುರುಮಾಡಿದ್ದಾರೆ. ಆದರೆ ಮಗುವಿನ ಅರ್ಧ ದೇಹ ಮನೆ ಬಳಿ ಇರುವ ಕಾಡಿನಲ್ಲಿ ಪತ್ತೆಯಾಗಿದೆ. ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು,  ಅಲ್ಲಿ ಹಿಂದೆ ಇಂಥದ್ದೇ ಘಟನೆ ನಡೆದಿತ್ತಾ ಎನ್ನುವುದರ ಕುರಿತು ಕೂಡ ಮಾಹಿತಿ ಕಲೆ ಹಾಕುತ್ತಿದ್ದಾರೆ. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights