ಮಹದಾಯಿ ನೀರು ಬಳಕೆ ಮಾಡಿಕೊಳ್ಳಲು ರಾಜ್ಯ ಸರ್ಕಾರ ವಿಫಲ – ವೀರೇಶ ಸೊಬರದಮಠ

ಮಹದಾಯಿ ನೀರು ಬಳಕೆ ಮಾಡಿಕೊಳ್ಳಲು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ನ್ಯಾಯಾಧೀಕರಣದ ತೀರ್ಪು ಬಂದನಂತರ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಬೇಕಿತ್ತು. ರಾಜಕೀಯ ಕಾರಣಕ್ಕಾಗಿ ಯೋಜನೆ ಜಾರಿಗೆ ವಿಳಂಭ ಮಾಡಲಾಗುತ್ತಿದೆ ಎಂದು ಹುಬ್ಬಳ್ಳಿಯಲ್ಲಿ ಮಹದಾಯಿ ಹೋರಾಟಗಾರ ವೀರೇಶ ಸೊಬರದಮಠ ಆಕ್ರೋಶ ಹೊರಹಾಕಿದ್ದಾರೆ.

ನ್ಯಾಯಾಧಿಕರಣದ ತೀರ್ಪು ಪ್ರಶ್ನಿಸಿ ಗೋವಾ ಸರ್ಕಾರ ಮೇಲ್ಮನವಿ ಸಲ್ಲಿಸಿಲ್ಲ‌. ರಾಜಕಾರಣಿಗಳು ತಪ್ಪು ಮಾಹಿತಿ ನೀಡಿ ಜನರ ದಾರಿ ತಪ್ಪಿಸುತ್ತಿದ್ದಾರೆ. ಕೂಡಲೆ ಗೆಜೆಟ್ ನೋಟಿಫಿಕೇಶನ್ ಹೊರಡಿಸದಿದ್ದರೆ ಸುಪ್ರೀಮ್‌ಕೋರ್ಟ್‌ಗೆ ಪಿಐಎಲ್ ಸಲ್ಲಿಸಲಾಗುವುದು. ಸೆಪ್ಟೆಂಬರ್ 25ರಿಂದ ಮಹದಾಯಿ ಯೋಜನೆ ಜಾರಿಗಾಗಿ ಪತ್ರ ಚಳುವಳಿ ಆಯೋಜಿಸಲಾಗಿದೆ.

ರಾಜ್ಯಪಾಲರಿಗೆ ಒಂದು ಲಕ್ಷ ಪತ್ರ ಬರೆಯುವ ಚಳುವಳಿ.  ನ್ಯಾಯಾಧಿಕರಣದ ತೀರ್ಪಿನಂತೆ ನೀರು ಬಳಕೆಗೆ ಕ್ರಮಕೈಗೊಳ್ಳಬೇಕು. ಅಧಿಸೂಚನೆ ಹೊರಡಿಸಲು ಕೇಂದ್ರಕ್ಕೆ ಸೂಚಿಸಬೇಕೆಂದು ಆಗ್ರಹ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights