ಮಹಾರಾಷ್ಟ್ರದಲ್ಲಿ ಸಚಿವ ಧನಂಜಯ್ ಮುಂಡೆ ಸೇರಿ ಮೂವರು ಸಚಿವರಿಗೆ ಕೊರೊನಾ ಸೋಂಕು!
ಮಹಾರಾಷ್ಟ್ರದಲ್ಲಿ ಸಚಿವ ಧನಂಜಯ್ ಮುಂಡೆ ಸೇರಿ ಮೂವರು ರಾಜ್ಯ ಸಚಿವರಿಗೆ ಕೋವಿಡ-19 ಸೋಂಕು ತಗುಲಿರುವುದು ದೃಢಪಟ್ಟಿದೆ.
ಬುಧವಾರ ರಾಜ್ಯ ಸಂಪುಟ ಸಭೆಯಲ್ಲಿ ಮತ್ತು ಪ್ರಯೋಗಾಲಯು ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಹಾರಾಷ್ಟ್ರದಲ್ಲಿ ಸಚಿವ ಧನಂಜಯ್ ಮುಂಡೆ ಸೇರಿ ಮೂವರು ರಾಜ್ಯ ಸಚಿವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಮಾತ್ರವಲ್ಲದೇ ಇವರು ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದು ಅಧಿಕ ಜನರಿಗೆ ಸೋಂಕು ಹರಡಿರುವ ಆತಂಕ ಹೆಚ್ಚಾಗಿದೆ.
ಧನಂಜಯ ಮುಂಡೆ ಅವರ ಬಳಿ ಕೆಲಸ ಮಾಡುತ್ತಿದ್ದ ಐವರು ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದ್ದು, ಯಾವುದೇ ರೋಗ ಲಕ್ಷಣಗಳು ಇಲ್ಲದೇ ಮುಂಡೆ ಅವರಿಗೆ ಸೋಂಕು ಕಂಡುಬಂದಿದೆ.
ಈ ಮೊದಲು ಲೋಕೋಪಯೋಗಿ ಸಚಿವ ಅಶೋಕ್ ಚೌಹಾಣ್ ಮತ್ತು ವಸತಿ ಸಚಿವ ಜಿತೇಂದ್ರ ಅಹವಾಡ್ ಕೂಡ ಕೊರೊನಾ ಸೋಂಕಿತರಾಗಿದ್ದರು. ಧನಂಜಯ್ ಅವರು ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಂಡಿದ್ದರು. ಬೀಡ್ ಜಿಲ್ಲೆಯಲ್ಲಿ ಗಂಟಲು ದ್ರವ ಪರೀಕ್ಷಾ ಕೇಂದ್ರದ ಉದ್ಘಾಟನೆಯನ್ನೂ ಮಾಡಿದ್ದರು. ಮಹಾರಾಷ್ಟ್ರದಲ್ಲಿ 97 ಸಾವಿರ ಕೊರೊನಾ ಸೋಂಕಿತ ಪ್ರಕರಣಗಳಿವೆ. ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 10 ಸಾವಿರ ಹೊಸ ಪ್ರಕರಣಗಳು ಪತ್ತೆಯಾಗಿವೆ. 8,498 ಮಂದಿ ಮೃತಪಟ್ಟಿದ್ದಾರೆ. ಒಂದೇ ದಿನ 396 ಮಂದಿ ಸಾವನ್ನಪ್ಪಿದ್ದಾರೆ.