ಮಹಿಳೆಯ ಗರ್ಭ ಸುರಕ್ಷತಾ ಕವಚ ತೆಗೆಯಲು ಲಂಚ ಪಡೆಯುತ್ತಿದ್ದ ವೇಳೆ ಸರ್ಕಾರಿ ವೈದ್ಯ ಎಸಿಬಿ ಬಲೆಗೆ…
ಮಹಿಳೆಯ ಗರ್ಭ ಸುರಕ್ಷತಾ ಕವಚ ತೆಗೆಯಲು ಲಂಚ ಪಡೆಯುತ್ತಿದ್ದ ವೇಳೆ ಸರ್ಕಾರಿ ವೈದ್ಯ ಎಸಿಬಿ ಬಲೆಗೆ ಬಿದ್ದ ಘಟನೆ ಹಾಸನದ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.
ಹಾಸನದ ಹಿಮ್ಸ್ ವೈದ್ಯ ಡಾ,ರಾಜಶೇಖರ್ 5 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾನೆ. ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮವಾದ ಗರ್ಭ ಸುರಕ್ಷತಾ ಕವಚ ತೆಗೆಯಲು ಲಂಚ ಪಡೆಯುತ್ತಿದ್ದ ವೈದ್ಯನ ಬಗ್ಗೆ ಸುಳಿವು ಸಿಕ್ಕ ಹಿನ್ನಲೆಯಲ್ಲಿ ಎಸಿಬಿ ಡಿವೈಎಸ್ ಪಿ ಪೂರ್ಣಚಂದ್ರ ನೇತೃತ್ವದಲ್ಲಿ ದಾಳಿ ಮಾಡಲಾಗಿತ್ತು.
ಮೂಡಿಗೆರೆ ತಾಲೂಕಿನ ಘಟ್ಟದಹಳ್ಳಿಯ ಚಂದ್ರಕಲಾ ಎಂಬ ಮಹಿಳೆಯ ಗರ್ಭ ಸುರಕ್ಷತಾ ಕವಚ ತೆಗೆಯಲು ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ವೈದ್ಯ ರಾಜಶೇಖರ್.