ಮಹಿಳೆಯ ಜೊತೆ ಅನೈತಿಕ ಸಂಬಂಧ : ಆ ವ್ಯಕ್ತಿಯನ್ನ ಕೊಂದವರು ಯಾರು..?

ಮಹಿಳೆಯ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ವ್ಯಕ್ತಿಯ ಮನೆಗೆ ನುಗ್ಗಿ ಮೂವರು ದುಷ್ಕರ್ಮಿಗಳು ಮನೆಯಲ್ಲಿದ್ದ ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ‌ ಮೊಗರಳ್ಳಿ ಮಂಟಿ ಗ್ರಾಮದಲ್ಲಿ ರಾತ್ರಿ ನಡೆದಿದೆ.

ನಂಜನಗೂಡು ತಾಲೂಕಿನ ಹುರ ಗ್ರಾಮದ ಉದಯ್ (39) ಮೃತ ವ್ಯಕ್ತಿಯಾಗಿದ್ದು, ಚಾಕು ಇರಿತಕ್ಕೆ ಒಳಗಾಗಿದ್ದ ಉದಯ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾನೆ.

ಅಡುಗೆಭಟ್ಟ ಕೆಲಸ ಮಾಡಿಕೊಂಡು ವಾಸವಿದ್ದ ಉದಯ್ ಮೊಗರಳ್ಳಿ ಗ್ರಾಮದ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ. ಸಂಜೆ ಉದಯ್ ಮನೆಗೆ ಏಕಾಏಕಿ ನುಗ್ಗಿದ್ದ ಮೂವರು ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು.

ತೀವ್ರ ಗಾಯಗೊಂಡಿದ್ದ ವ್ಯಕ್ತಿಯನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ.ಕೆ.ಆರ್.ಎಸ್.ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕೊಲೆಗೈದ ಆರೋಪಿಗಳ ಪತ್ತೆ ಹುಡಾಕಾಟ ಆರಂಭಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights