ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಇನ್ನಿಲ್ಲ…!
ಬಿಜೆಪಿ ಪಕ್ಷವನ್ನು ತಳಮಟ್ಟದಲ್ಲಿ ಕಟ್ಟಿದ, ಅಮುಲ್ಯ ರತ್ನ, ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ನಿಧನವಾಗಿದ್ದಾರೆ.
ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ ಅರುಣ್ ಜೇಟ್ಲಿ ಅವರು ಆಗಸ್ಟ್ 9 ರಂದು ಆಸ್ಪತ್ರೆಗೆ ದಾಖಲಾಗಿದ್ದರು. 66 ವಯಸ್ಸು ಆಗಿದ್ದು ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದರು. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
5 ಜನ ವೈದ್ಯರ ತಂಡ ಇವರಿಗೆ ಚಿಕಿತ್ಸೆ ನೀಡಿದರು. ಆದರೂ ಕಿತ್ಸೆ ಫಲಕಾರಿಯಾಗದೆ 12.30 ನಿಮಿಷಕ್ಕೆ ನಿಧನರಾಗಿದ್ದಾರೆ. ಮತ್ತೆ ವಾಪಸ್ಸು ಬರುತ್ತಾರೆ ಎನ್ನುವ ನಂಬಿಕೆ ಎಲ್ಲರಲ್ಲೂ ಇತ್ತು. ಆದರೆ ವಿಧಿ ಅವರನ್ನು ನಮ್ಮೊಂದಿಗೆ ಹೆಚ್ಚು ಕಾಲ ಇರಲು ಬಿಡಲಿಲ್ಲ.
ಸಿಎಂ ಯಡಿಯೂರಪ್ಪ ಸಂತಾಪ ಸೂಚಿಸಿದ್ದು, ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳುತ್ತೇನೆಂದು ತಿಳಿಸಿದ್ದಾರೆ.