ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಬಿ.ಎಸ್. ಯಡಿಯೂರಪ್ಪ ಗರಂ
ಸಚಿವ ಸ್ಥಾನ ವಂಚಿತ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗರಂ ಆಗಿದ್ದಾರೆ.
ಏನಪ್ಪಾ ಹೀರೋ ಆಗಲು ಹೊರಟಿದ್ದೀಯಾ?, ಏನ್ ಸಮಾಚಾರ, ವಿಷಯ ಗೊತ್ತಲ್ಲ ಎಂದು ಬಿ.ಎಸ್.ವೈ. ರೇಣುಕಾಚಾರ್ಯ ಅವರಿಗೆ ಹೇಳಿದ್ದಾರೆ ಎನ್ನಲಾಗಿದೆ.
ಬೇರೆಯವರನ್ನು ಸಮಾಧಾನ ಪಡಿಸಬೇಕು. ಅಸಮಾಧಾನಿತರನ್ನು ಸಮಾಧಾನಪಡಿಸಬೇಕಾಗಿರುವ ನೀನೇ ಹೀಗೆ ಮಾಡಿದರೆ ಹೇಗೆ? ನೀನೇ ಮಾಧ್ಯಮಗಳಿಗೆ ಹೇಳಿಕೆ ನೀಡಿದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ. ಯಡಿಯೂರಪ್ಪ ಹೀಗೆ ಪ್ರಶ್ನಿಸಿದಾಗ ಮಾತನಾಡದೆ ಸುಮ್ಮನಾದ ರೇಣುಕಾಚಾರ್ಯ, ಸುಮ್ಮನೆ ನನ್ನ ಹೆಸರು ತಂದಿದ್ದಾರೆ ಎಂದು ಹೇಳಿದ್ದಾರೆ ಎನ್ನಲಾಗಿದೆ.
ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ರೇಣುಕಾಚಾರ್ಯ ಅಸಮಾಧಾನ ವ್ಯಕ್ತಪಡಿಸಿ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುವ ಮಾತನ್ನಾಡಿದ್ದರು. ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ನಂತರದಲ್ಲಿ ನಾನು ಬಿ.ಎಸ್.ವೈ. ಬಂಟ ಎಂದೆಲ್ಲಾ ಹೇಳಿದ್ದರು.