ಮೇ.4 ರಿಂದ ಹಸಿರು ವಲಯದಲ್ಲಿ KSRTC ಬಸ್ ಸಂಚಾರಕ್ಕೆ ಸಿಎಂ ಸಮ್ಮತಿ…
ಕೊರೊನಾ ಲಾಕ್ ಡೌನ್ ನಿಂದಾಗಿ ವಲಸೆ ಕಾರ್ಮಿಕರು ಮನೆ ಸೇರಲಾಗದೇ ಸಿಲುಕಿಕೊಂಡ ಹಿನ್ನೆಲೆ ಶನಿವಾರದಿಂದ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದರ ಜೊತೆಗೆ ಗ್ರೀನ್ ಝೋನ್ ನಲ್ಲಿಯೂ ಕೆಎಸ್ ಆರ್ ಟಿಸಿ ಬಸ್ ಗಳ ಓಡಾಟಕ್ಕೆ ಸರ್ಕಾರ ಅವಕಾಶ ಕಲ್ಪಿಸಿಕೊಟ್ಟಿದೆ.
ಹೌದು… ಬೆಂಗಲೂರಿನಲ್ಲಿ ಸಿಲುಕಿದ ಅದೆಷ್ಟೋ ಕಾರ್ಮಿಕರು ತಮ್ಮ ಊರುಗಳಿಗೆ ಹೋಗಲು ಸರ್ಕಾರ ಅವಕಾಶ ಕಲ್ಪಿಸಿದ್ದು, ಹಸಿರಿ ವಲಯದಲ್ಲೂ ಕೆಎಸ್ ಆರ್ ಟಿಸಿ ಬಸ್ ಗಳ ಓಡಾಟಕ್ಕೆ ಅನುಮತಿ ನೀಡಲಾಗಿದೆ. ಮೇ 4 ರಿಂದ ಕೆಎಸ್ ಆರ್ ಟಿಸಿ ಬಸ್ ಗಳು ಹಸಿರು ವಲಯ ಇರುವ ಜಿಲ್ಲೆಗಳ ಒಳಗಡೆ ಸಂಚರಿಸಬಹುದಾಗಿದೆ. ಆದರೆ ಖಾಸಗಿ ಬಸ್ ಸಂಚಾರಕ್ಕೆ ರಾಜ್ಯ ಸರ್ಕಾರ ಯಾವುದೇ ಅನುಮತಿ ನೀಡಿಲ್ಲ.
ಆದರೆ ಬಸ್ ಗಳಲ್ಲಿ ಸಂಚಾರ ಮಾಡುವ ಪ್ರಾಯಾಣಿಕರು ನಿಯಮಗಳನ್ನು ಪಾಲಿಸುವುಸು ಕಡ್ಡಾಯವಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಹಾಕಿಕೊಳ್ಳುವುದು ಕಡ್ಡಾಯ. ಜೊತೆಗೆ ಪ್ರಯಾಣಿಕರಿಗೆ ಥರ್ಮಲ್ ಪರೀಕ್ಷೆ ಕಡ್ಡಾಯವಾಗಬೇಕು. ಒಂದು ಬಸ್ನಲ್ಲಿ ಸೀಟ್ ಸಂಖ್ಯೆ ಅರ್ಧದಷ್ಟು ಮಾತ್ರ ಜನರು ಪ್ರಯಾಣಿಸಬೇಕು.
ರಾಜ್ಯದ 12 ಹಸಿರು ವಲಯ ಜಿಲ್ಲೆಗಳಲ್ಲಿ ಸೋಮವಾರದಿಂದ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭವಾಗಲಿದೆ. ಆದರೆ ಜಿಲ್ಲೆಯ ಒಳಗೆ ಮಾತ್ರ ಬಸ್ಗಳು ಸಂಚರಿಸಲಿವೆ. ಅಂತರ್ ಜಿಲ್ಲೆಯ ಬಸ್ ಸಂಚಾರ ಇರುವುದಿಲ್ಲ. ಕೊಪ್ಪಳ, ಚಿತ್ರದುರ್ಗ, ಚಾಮರಾಜನಗರ, ಕೋಲಾರ, ರಾಮನಗರ, ಹಾವೇರಿ, ಹಾಸನ, ಹಾವೇರಿ, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಮಾತ್ರ ಕೆಎಸ್ಆರ್ಟಿಸಿ ಬಸ್ ಸಂಚಾರ ನಾಳೆಯಿಂದ ಆರಂಭವಾಗಲಿದೆ.
ಚಿಕ್ಕಮಗಳೂರಿನ ಜಿಲ್ಲೆಯೊಳಗೆ ನಾಳೆಯಿಂದ ಶೇಕಡ 25ರಷ್ಟು ಬಸ್ ಓಡಾಡಲು ಅನುಮತಿ ನೀಡಲಾಗಿದೆ. ಒಂದು ಬಸ್ನಲ್ಲಿ 27 ಜನ ಮಾತ್ರ ಸಂಚಾರ ಮಾಡಬೇಕು. ಅರ್ಧಗಂಟೆ ಮುಂಚೆ ಬಸ್ ನಿಲ್ದಾಣಕ್ಕೆ ಬರಬೇಕು. ಗುರುತಿನ ಚೀಟಿ ಕಡ್ಡಾಯವಾಗಿ ತರಬೇಕು. ಸ್ಯಾನಿಟೈಸರ್ ನಿಂದ ಕೈ ತೊಳೆದು ಬಸ್ ಹತ್ತಬೇಕು. ಬಸ್ನಲ್ಲಿ ಏನನ್ನೂ ತಿನ್ನುವಂತಿಲ್ಲ ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಈ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು, ಕಂಟೇನ್ಮೆಂಟ್ ಮತ್ತು ರೆಡ್ ಜೋನ್ ತಾಲೂಕುಗಳನ್ನು ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲೂ ಬಸ್ ಸಂಚಾರ ಆರಂಭಿಸಲು ಸಿಎಂ ಸಮ್ಮತಿ ನೀಡಿದ್ದಾರೆ ಎಂದರು.