ಮೈಸೂರು ಪಾಲಿಕೆ ಮಾಜಿ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ…!
ಮೈಸೂರು ಪಾಲಿಕೆ ಮಾಜಿ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾದ ಘಟನೆ ನಗರದ ಯರಗನಹಳ್ಳಿಯಲ್ಲಿ ನಡೆದಿದೆ.
ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಹಲ್ಲೆಗೊಳಗಾಗಿ ಚೇತರಿಸಿಕೊಳ್ಳುತ್ತಿದ್ದಂತೆ ಸದ್ಯ ಅವರ ಆಪ್ತರ ಮೇಲೆ ಹಲ್ಲೆ ನಡೆದಿದೆ. ತನ್ವೀರ್ ಸೇಠ್ ಆಪ್ತ ಮತ್ತು ಕಾಂಗ್ರೆಸ್ ಮುಖಂಡರಾಗಿರುವ ಅಣ್ಣಯ್ಯರ ಮೇಲೆ ಹಲ್ಲೆ ಮಾಡಲಾಗಿದೆ. ಪೊಲೀಸರು ಗ್ರಾಮದೇವತೆ ಹಬ್ಬದ ವೇಳೆ ಲಾಂಗು ಝಳಪಿಸಿದ ಪುಡಾರಿಗಳ ಹುಡುಕಾಟ ನಡೆಸಿದ್ದಾರೆ .
ರಾಜಕೀಯ ವೈಷಮ್ಯದಿಂದ ಹಲ್ಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಯರಗನಹಳ್ಳಿಯ ಮಹದೇವು , ಚಿದಂಬರಂ ಎಂಬುವವರಿಂದ ಕೃತ್ಯವೆಸಗಿರುವ ಆರೋಪ ಕೇಳಿ ಬಂದಿದೆ.
ಖಾಸಗಿ ಆಸ್ಪತ್ರೆಗೆ ಅಣ್ಣಯ್ಯ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಗ್ರಾಮಸ್ಥರು ಆರೋಪಿ ಮಹದೇವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಮತ್ತೋರ್ವ ಆರೋಪಿ ಚಿದಂಬರಂ ಪರಾರಿಯಾಗಿದ್ದು, ಆರೋಪಿಯ ಪತ್ತೆಗಾಗಿ ಪೊಲೀಸರು ಕಾರ್ಯ ಚುರುಕುಗೊಳಿಸಿದ್ದಾರೆ. ಆಲನಹಳ್ಳಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.